ಬೆಂಗಳೂರು: ಬೆಂಗಳೂರಿನ ರಸ್ತೆಗಳ ದುಸ್ಥಿತಿಗೆ ಸಂಬಂಧಿಸಿದಂತೆ 2015ರಲ್ಲಿ ಸಲ್ಲಿಸಿದ್ದ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಂತೆ ಬೆಂಗಳೂರಿನ ಮೂಲಸೌಕರ್ಯ ಹದಗೆಟ್ಟಿರುವುದು ಬೆಳಕಿಗೆ ಬಂದಿದ್ದು, ಕೂಡಲೇ 200 ಕ್ಕೂ ಹೆಚ್ಚು ರಸ್ತೆ ಗುಂಡಿಳನ್ನು ಸರಿಪಡಿಸುವಂತೆ ನ್ಯಾಯಾಲಯವು ಬಿಬಿಎಂಪಿಗೆ ಸೂಚಿಸಿದೆ.
ಏಳು ವರ್ಷಗಳ ಹಿಂದೆ ಸಲ್ಲಿಸಲಾದ ಪ್ರಕರಣವನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ನಗರದ ಮುಖ್ಯ ರಸ್ತೆಗಳ ಪರಿಸ್ಥಿತಿಯನ್ನು ನಿವಾರಿಸುವಲ್ಲಿ ಬಿಬಿಎಂಪಿಯು ವಿಫಲಗೊಂಡಿರುವ ಕಾರಣ, ಮುಖ್ಯ ಮಾರ್ಗಗಳಲ್ಲಿನ 200 ಕ್ಕೂ ಹೆಚ್ಚು ಗುಂಡಿಗಳನ್ನು ಸಂಪೂರ್ಣವಾಗಿ ಸರಿಪಡಿಸುವಂತೆ ನಾಗರಿಕ ಸಂಘಟನೆಗೆ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಮತ್ತು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ವಿಭಾಗೀಯ ಪೀಠವು ಹತ್ತು ದಿನಗಳ ಕಾಲಾವಕಾಶ