Wednesday, July 16, 2025

ಸತ್ಯ | ನ್ಯಾಯ |ಧರ್ಮ

60 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ : ಆರ್ ಅಶೋಕ್

ಬೆಂಗಳೂರು : ರಾಜ್ಯದಲ್ಲಿ ಇದುವರೆಗೂ ಗುರುತೇ ಇಲ್ಲದ ತಾಂಡಾ, ಹಟ್ಟಿ, ಹಾಡಿ, ದೊಡ್ಡಿಯಂತಹ ಸುಮಾರು 3500 ಕ್ಕೂ ಹೆಚ್ಚು ಗ್ರಾಮಗಳಿಗೆ ಹೆಸರು, ವಿಳಾಸಗಳನ್ನು ಕೊಟ್ಟು ಕಂದಾಯ ಗ್ರಾಮಗಳಾಗಿ ಮಾಡುವ ಕಾಲಾವಕಾಶ ಕೂಡಿ ಬಂದಿದೆ. ಈ ವಿಚಾರವಾಗಿ ನವೆಂಬರ್‌ ಕೊನೆಯ ವಾರದೊಳಗೆ 60 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡುವುದಾಗಿ ಕಂದಾಯ ಸಚಿವ ಆರ್ ಅಶೋಕ್‌ ತಿಳಿಸಿದರು.

ಸುಮಾರು 3500 ಕ್ಕೂ ಪರಿಚಯವೇ ಇಲ್ಲದ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆಯಾಗಿರದ ಕಾರಣ ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದರು. ಸರ್ಕಾರ ಈ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ನಿರ್ಧಾರ ಮಾಡಿದೆ. 60 ಸಾವಿರ ಕುಟುಂಬಗಳಿಗೆ ಅವರು ವಾಸಿಸುತ್ತಿದ್ದ ಜಾಗವನ್ನು ನೋಂದಣಿ ಮಾಡಿಸಿಕೊಡಲಾಗುವುದು ಎಂದು ಹೇಳಿದರು.

ಕಲಬುರಗಿ ಮತ್ತು ದಾವಣಗೆರೆಯಲ್ಲಿ ಪ್ರತ್ಯೇಕ ಸಮಾವೇಶಗಳನ್ನು ಏರ್ಪಡಿಸಿ ಹಕ್ಕು ಪತ್ರಗಳನ್ನು ನೀಡಲಾಗುತ್ತದೆ. ಈ ಯೋಜನೆಗೆ ಯಾದಗಿರಿ, ರಾಯಚೂರು, ವಿಜಯಪುರ, ಬೀದರ್‌, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಮೊದಲ ಆದ್ಯತೆಯಾಗಿದೆ. ಶೇ.90 ರಷ್ಟು ಭೂಮಿ ಸರ್ಕಾರದ ಜಾಗವೇ ಆಗಿರುವುದರಿಂದ ಈ ಕಾರ್ಯಕ್ರಮಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೊಂಡಿದ್ದೇವೆ. ಒಂದು ವೇಳೆ ಭೂಮಿ ಖಾಸಗಿ ವ್ಯಕ್ತಿಗಳಾಗಿದ್ದರೆ ಭೂಮಾಲಿಕರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಈ ಹಕ್ಕು ಪತ್ರ ನೀಡುವ ವಿಚಾರವಾಗಿ ಖಾಸಗಿ ವ್ಯಕ್ತಿಗಳಿಗೆ ಆಕ್ಷೇಪಣೆ ಇದ್ದರೆ ಅದನ್ನು ತಿಳಿಸಲು ಸರ್ಕಾರ ಏಳು ದಿನಗಳ ಕಾಲಾವಕಾಶ ನೀಡಿದೆ ಎಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್‌. ಅಶೋಕ್‌ ಮಾಹಿತಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page