Saturday, June 21, 2025

ಸತ್ಯ | ನ್ಯಾಯ |ಧರ್ಮ

ಇಂದಿನಿಂದ ಶುರುವಾಗಲಿದೆ 67 ದಿನಗಳ ಭಾರತ್ ಜೋಡೋ ನ್ಯಾಯ ಯಾತ್ರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಇಂದು ಮಣಿಪುರದ ತೌಬಲ್ ಜಿಲ್ಲೆಯಿಂದ ಪ್ರಾರಂಭವಾಗಲಿದೆ. ಮಣಿಪುರದ ಹಿಂಸಾಚಾರದ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಯಾತ್ರೆ ಪ್ರಾರಂಭಿಸುವ ಸ್ಥಳದ ಬಗ್ಗೆ ನಿರಾಕರಣೆ ತೋರಿದ್ದರೂ ಈಗ ಖಾಸಗಿ ಜಾಗದಿಂದ ಯಾತ್ರೆ ಶುರು ಆಗುವ ಬಗ್ಗೆ ಕಾಂಗ್ರೆಸ್ ತಿಳಿಸಿದೆ.

ಈ ಮೊದಲು ರಾಜಧಾನಿ ಇಂಫಾಲ್ನಿಂದ ಪ್ರಾರಂಭವಾಗಬೇಕಿದ್ದ ಈ ಯಾತ್ರೆ ಇಂದು ಮಧ್ಯಾಹ್ನ 12 ಗಂಟೆಗೆ ಖೊಂಗ್ಜೋಮ್ ಯುದ್ಧ ಸ್ಮಾರಕದಿಂದ ಪ್ರಾರಂಭವಾಗಲಿದೆ. ರಾಜ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಮಣಿಪುರ ಸರ್ಕಾರ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ.

ಈ ಹಿಂದಿನ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗಿನ ಯಾತ್ರೆ ಸಂಪೂರ್ಣವಾಗಿ ಪಾದಯಾತ್ರೆಯೇ ಆಗಿತ್ತು. ಆದರೆ ರಾಹುಲ್ ಗಾಂಧಿ ಅವರು ಮಣಿಪುರದ ತೌಬಲ್ ಜಿಲ್ಲೆಯಿಂದ ಮುಂಬೈಗೆ 6,200 ಕಿಲೋಮೀಟರ್ ದೂರವನ್ನು 60-70 ಯಾತ್ರಿಗಳೊಂದಿಗೆ ಬಸ್ ಮೂಲಕ ಯಾತ್ರೆ ಮುಂದುವರೆಸುವ ಬಗ್ಗೆ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ತಿಳಿಸಿದ್ದಾರೆ. ಮಾರ್ಗಮಧ್ಯೆ ಬರುವ ದಟ್ಟಾರಣ್ಯ ಹಾಗೂ ಪಕ್ಷದ ಇತರೆ ಹಿರಿಯ ನಾಯಕರ ಆರೋಗ್ಯದ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ಸ್ಥಳಗಳಲ್ಲಿ ಮಾತ್ರ ಪಾದಯಾತ್ರೆ ಮೂಲಕ ಯಾತ್ರೆ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಚಾಲನೆ ನೀಡಲು ಇಂಫಾಲ್ನ ಹಪ್ಟಾ ಕಾಂಗ್ಜೆಬಂಗ್ ಸಾರ್ವಜನಿಕ ಮೈದಾನಕ್ಕೆ ಅವಕಾಶ ನೀಡುವಂತೆ ನಾವು ಜನವರಿ 2 ರಂದು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪಿಸಿದ್ದೆವು. ಯಾತ್ರೆಯು ಇಂಫಾಲ್ ನಿಂದ ಪ್ರಾರಂಭವಾಗಿ ಮುಂಬೈನಲ್ಲಿ ಕೊನೆಗೊಳ್ಳಲಿದೆ ಎಂದು ನಾವು ಘೋಷಿಸಿದ್ದೇವೆ” ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಚಾಲನೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಚಾಲನೆ ನೀಡಲು ಸಜ್ಜಾಗಿದ್ದಾರೆ ಮತ್ತು ಪ್ರಾರಂಭದ ಸ್ಥಳವನ್ನು ಬದಲಾಯಿಸಲಾಗಿದ್ದರೂ, ಯಾತ್ರೆಯ ಮಾರ್ಗವು ಒಂದೇ ಆಗಿರುತ್ತದೆ ಎಂದು ಪಕ್ಷದ ನಾಯಕರು ದೃಢಪಡಿಸಿದರು.

ಜನವರಿ 14 ರಂದು ಮಣಿಪುರದಲ್ಲಿ ಪ್ರಾರಂಭವಾಗುವ ಈ ಯಾತ್ರೆ ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದ್ದು, 67 ದಿನಗಳ ಅವಧಿಯಲ್ಲಿ ಒಟ್ಟು 6,713 ಕಿಲೋಮೀಟರ್ ದೂರವನ್ನು ಕ್ರಮಿಸಿದೆ. ಯೋಜಿತ ಮಾರ್ಗವು 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಹಾದುಹೋಗುವುದನ್ನು ಒಳಗೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page