Monday, June 17, 2024

ಸತ್ಯ | ನ್ಯಾಯ |ಧರ್ಮ

ಚಿತ್ರದುರ್ಗ ಬಳಿ ಭೀಕರ ರಸ್ತೆ ಅಪಘಾತ ; ಮೂವರ ಸಾವು

ಚಿತ್ರದುರ್ಗ : ಚಿತ್ರದುರ್ಗ ನಗರ ಪ್ರವಾಸಿ ಮಂದಿರದ ಬಳಿ ರಸ್ತೆಯ ಡಿವೈಡರ್ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ.

ನಿನ್ನೆ ತಡರಾತ್ರಿ ನಡೆದ ಈ ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಎಂದಷ್ಟೇ ಗುರುತಿಸಲ್ಪಟ್ಟಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿತ್ರದುರ್ಗ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು