Sunday, June 23, 2024

ಸತ್ಯ | ನ್ಯಾಯ |ಧರ್ಮ

ಸ್ವಾರ್ಥ ರಾಜಕಾರಣ ಮಾಡುವವರು ಉಚಿತ ಪೆಟ್ರೋಲ್ ಡೀಸೆಲ್‌ ನೀಡಬಹುದು: ಮೋದಿ

ನವದೆಹಲಿ: ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಜಿಎಸ್​ಟಿ  ಹೀಗೆ ಹಲವು ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿತ್ತು. ಈ ಕುರಿತು ಕಾಂಗ್ರೆಸ್‌ ವಿರುದ್ಧ ಟ್ವೀಟ್‌ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಯಾರಾದರೂ ಅವರ ರಾಜಕೀಯ ಸ್ವ-ಕೇಂದ್ರಿತವಾಗಿದ್ದರೆ ಉಚಿತ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಘೋಷಿಸಬಹುದು ಎಂದು ಹೇಳಿದ್ದಾರೆ.

ಇಂತಹ ಕ್ರಮಗಳು ನಮ್ಮ ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ದೇಶವು ಸ್ವಾವಲಂಬಿಯಾಗುವುದನ್ನು ತಡೆಯುತ್ತದೆ. ಇದು ಭಾರತದ ತೆರಿಗೆದಾರರ ಮೇಲೆ ಹೊರೆಯನ್ನು ಹೆಚ್ಚಿಸುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ಹತಾಶೆ ಮತ್ತು ಋಣಾತ್ಮಕ ಯೋಚನೆ ಇರುವವರು ಮಾಟಮಂತ್ರದ ಮೊರೆ ಹೋಗುತ್ತಾರೆ. ಮಾಟಮಂತ್ರವನ್ನು ಪ್ರಚಾರ ಮಾಡುವ ಪ್ರಯತ್ನ ನಡೆದಿರುವುದನ್ನು ನಾವು ಆಗಸ್ಟ್ 5 ರಂದು ನೋಡಿದ್ದೇವೆ. ಕಪ್ಪು ಬಟ್ಟೆ ಧರಿಸುವುದರಿಂದ ತಮ್ಮ ಹತಾಶೆಯ ಅವಧಿ ಕೊನೆಗೊಳ್ಳುತ್ತದೆ ಎಂದು ಈ ಜನರು ಭಾವಿಸುತ್ತಾರೆ, ಆದರೆ ಅವರು ಎಷ್ಟೇ ಮಾಟಮಂತ್ರ ಮಾಡಿದರೂ ಮತ್ತು ಮೂಢನಂಬಿಕೆಗಳಲ್ಲಿ ನಂಬಿಕೆ ಇಟ್ಟರೂ ಜನರು ಅವರನ್ನು ಎಂದಿಗೂ ನಂಬುವುದಿಲ್ಲ ಎಂಬುದು ಈ ಜನರಿಗೆ  ತಿಳಿದಿಲ್ಲವೇ ಎಂದು ಕಾಂಗ್ರೆಸಿಗರನ್ನು ಕುರಿತು ಟೀಕಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು