Monday, June 17, 2024

ಸತ್ಯ | ನ್ಯಾಯ |ಧರ್ಮ

ಸಿದ್ದರಾಮಯ್ಯ ಮೇಲಿನ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ ಗಲಭೆ : ದಿನೇಶ್‌ ಗುಂಡುರಾವ್‌

ಬೆಂಗಳೂರು: ಮಡಿಕೇರಿಯಲ್ಲಿ ಸಿದ್ದರಾಮಯ್ಯ ವಿರುದ್ಧ ನಡೆದ ಪ್ರತಿಭಟನೆಯು ಸರ್ಕಾರಿ ಪ್ರಾಯೋಜಿತ ಗಲಭೆ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ವಾಗ್ದಾಳಿ ನಡೆಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯರ ವಿರುದ್ಧ ಯುವ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆದಿರುವುದು ಹೇಡಿಗಳ ಲಕ್ಷಣ. ಈ‌ ಕೃತ್ಯ ಅವರ ಹತಾಶೆ ತೋರಿಸುತ್ತಿದೆ. ಸಿದ್ದರಾಮಯ್ಯರವರನ್ನು ಸೈದಾಂತಿಕವಾಗಿ ಎದುರಿಸಲಾಗದ ಬಿಜೆಪಿ ಇಂತಹ ಹೀನ ನಡೆ ಪ್ರದರ್ಶಿಸುತ್ತಿದೆ. ಇದೊಂದು ಸರ್ಕಾರಿ ಪ್ರಾಯೋಜಿತ ಗಲಭೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿಸಿದ್ದಾರೆ. ವಿಪಕ್ಷ ನಾಯಕರಿಗೇ ಈ ರಾಜ್ಯದಲ್ಲಿ ಭದ್ರತೆ ಇಲ್ಲ. ಇನ್ನು ಜನಸಾಮಾನ್ಯರಿಗೆ ರಕ್ಷಣೆ ಎಲ್ಲಿ? ಎಂದು ಸರ್ಕಾರವನ್ನ ಪ್ರಶ್ನಿಸಿದ್ದಾರೆ.  

ಇದು ಗಂಭೀರ ಸ್ವರೂಪದ ಭದ್ರತಾ ಲೋಪ. ಇಂತಹ ಕಿಡಿಗೇಡಿ‌ ಕೃತ್ಯ ನಡೆಸುವ ಮೂಲಕ ವಿಪಕ್ಷದ ಬಾಯಿ ಮುಚ್ಚಿಸಬಹುದು ಎಂದು ಸರ್ಕಾರ ಭಾವಿಸಿರಬಹುದು. ಆದರೆ ನಾವು ಹೆದರುವ ಪ್ರಶ್ನೆಯೇ ಇಲ್ಲ ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು