Saturday, June 15, 2024

ಸತ್ಯ | ನ್ಯಾಯ |ಧರ್ಮ

ಬ್ರೇಕಿಂಗ್:‌ ತಾನು RSS ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲವೆಂದ ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಇಂದು ಬೆಳಗಿನಿಂದ ಸಾಮಾಜಿಕ ಜಾಲತಾಣದಲ್ಲಿ ಸಾಹಿತಿ, ನಿರ್ದೇಶಕ ನಾಗತಿಹಳ್ಳಿಯವರ ಅಧ್ಯಕ್ಷತೆ ಹೊಂದಿರುವ RSS ಸಂಘಟನೆಯ ಗುರುಪೂಜೆಯ ಆಹ್ವಾನ ಪತ್ರಿಕೆಯೊಂದು ಸದ್ದು ಮಾಡುತ್ತಿದ್ದು. ಈ ಕುರಿತು ನಾಗತಿಹಳ್ಳಿಯವರು ಸ್ಪಷ್ಟನೆ ಕೊಟ್ಟಿದ್ದಾರೆ. ಈ ಆಹ್ವಾನ ಪತ್ರಿಕೆಯ ಕಾರಣದಿಂದಾಗಿ ಕೋಮುವಾದದ ವಿರುದ್ಧ ಇರುವ ಜನರು ಅವರನ್ನು ಟೀಕಿಸಿ ಪೋಸ್ಟ್‌ ಮಾಡಿದ್ದರು.

ಈ ಕುರಿತು ತಮ್ಮ ಫೇಸ್ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು,

“ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ.ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ.ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ.
ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ,ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ.ಅದನ್ನೇ ಮುಂದುವರೆಸುತ್ತೇನೆ.
ತಪ್ಪು ತಿಳಿಯಲು,ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ,ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು.” ಎಂದು ಬರೆದುಕೊಂಡಿದ್ದಾರೆ.

ಅವರ ಈ ಪೋಸ್ಟ್‌ ಈಗ ಬಲಪಂಥೀಯ ಟ್ರೋಲ್‌ಗಳ ದಾಳಿಗೆ ಒಳಗಾಗುತ್ತಿದ್ದು. ಹೆಸರಿಲ್ಲದ ಖಾತೆಗಳಿಂದ ಇಲ್ಲಸಲ್ಲದ ಕಮೆಂಟುಗಳ ಸುರಿಮಳೆಯಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು