Saturday, June 15, 2024

ಸತ್ಯ | ನ್ಯಾಯ |ಧರ್ಮ

ಬಿ ರಾಚಯ್ಯ ದತ್ತಿನಿಧಿ ಪ್ರಶಸ್ತಿಗೆ ದಿನೇಶ್‌ ಅಮೀನ್‌ ಮಟ್ಟು ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ನೀಡುವ 2022-23 ನೇ ಸಾಲಿನ ಬಿ ರಾಚಯ್ಯ ದತ್ತಿನಿಧಿ ವಾರ್ಷಿಕ  ಪ್ರಶಸ್ತಿಗೆ ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯು ರು. 10,000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ  ಎಂದು ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ತಿಳಿಸಿದೆ.

“ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತ, ದಮನಿತರ ಪರವಾಗಿ ವೃತ್ತಿಪರತೆಯಿಂದ ದುಡಿದಂತಹ ಸಾರ್ವತ್ರಿಕವಾಗಿ ಹಿರಿಯ ಪತ್ರಕರ್ತರೊಬ್ಬರನ್ನು ಗುರುತಿಸಿ ಪ್ರತಿವರ್ಷ ಹಿರಿಯ ರಾಜಕಾರಣಿ ಬಿ ರಾಚಯ್ಯ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತದೆ” ಎಂದು ಸಂಘವು ಹೇಳಿದೆ.‌

ಅದೇ ರೀತಿ ಸುದ್ದಿಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಎಸ್ಸಿ/ಎಸ್ಟಿ  ಸಮುದಾಯದ ಮೂವರು ಹಿರಿಯ ಸಂಪಾದಕರಿಗೆ ನೀಡಲಾಗುವ ʼವಾರ್ಷಿಕ ಪ್ರಶಸ್ತಿʼ ಗಳಿಗೆ ಕೋಲಾರದ ಸಿ ಮುನಿಯಪ್ಪ, ಚಿತ್ರದುರ್ಗದ ಮೈಲಾರಪ್ಪ ಮತ್ತು ಬೀದರಿನ ಮಾಳಪ್ಪ ಅಡಸಾರೆ ಅವರುಗಳು  ಭಾಜನರಾಗಿದ್ದಾರೆ.

ಪ್ರಶಸ್ತಿಯು ತಲಾ 5,000ರೂ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಇದೇ ಜುಲೈ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಚೆಲುವರಾಜು ಮತ್ತು ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕೆರಗೋಡು ತಿಳಿಸಿದ್ದಾರೆ.  

Related Articles

ಇತ್ತೀಚಿನ ಸುದ್ದಿಗಳು