Tuesday, June 18, 2024

ಸತ್ಯ | ನ್ಯಾಯ |ಧರ್ಮ

ಉಡುಪಿ | ವಿಡಿಯೋ ಪ್ರಕರಣ: ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ‍್ಳಿಯಪ್ಪ ನೇಮಕ

ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ಪ್ರಕರಣದ ತನಿಖಾಧಿಕಾರಿ ಮಂಜುನಾಥ ಗೌಡ ಅವರನ್ನು ಬದಲಾಯಿಸಿ ಕುಂದಾಪುರ DYSP ಬೆಳ್ಳಿಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ನೇಮಿಸಿದ್ದಾರೆ.

ತನಿಖೆ ಆರಂಭಗೊಂಡ ದಿನದಿಂದಲೂ ವಿದ್ಯಾರ್ಥಿ ಸಂಘಟನೆಗಳು ಹಾಗೂ ಭಾರತೀಯ ಜನತಾ ಪಕ್ಷವು ಮಲ್ಪೆ ಇನ್ಸ್ ಪೆಕ್ಟರ್ ಮಂಜುನಾಥ ಗೌಡ ಅವರನ್ನು ತನಿಖಾಧಿಕಾರಿ ಸ್ಥಾನದಿಂದ ಕೆಳಗಿಳಿಸಿ ಬೇರೆಯವರನ್ನು ನೇಮಿಸಬೇಕು ಎಂದು ಒತ್ತಾಯ ಮಾಡುತ್ತಿದ್ದವು.

ಅವರ ಮನವಿಗೆ ಸ್ಪಂದಿಸಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ಹೊಸ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು