Sunday, June 16, 2024

ಸತ್ಯ | ನ್ಯಾಯ |ಧರ್ಮ

ಸುಳ್ಯದಲ್ಲಿ ಅನೈತಿಕ ಪೊಲೀಸ್‌ ಗಿರಿ: ಐವರ ವಿರುದ್ಧ ಕೇಸ್‌, ಒಬ್ಬನ ಕೈಗೆ ಪೊಲೀಸ್‌ ಬೇಡಿ

ಸುಳ್ಯ: ಅನೈತಿಕ ಪೊಲೀಸ್‌ ಗಿರಿಗೆ ತವರಾಗಿರುವ ದಕ್ಷಿಣ ಕನ್ನಡದಲ್ಲಿ ಇನ್ನೊಂದು ಅಂತಹ ಕೃತ್ಯದ ವರದಿಯಾಗಿದೆ. ಸಂತ್ರಸ್ಥ ವ್ಯಕ್ತಿಯ ದೂರಿನ ಮೇರೆಗೆ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಬ್ಬನನ್ನು ಬಂಧಿಸಲಾಗಿದೆ.

ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ (39ವರ್ಷ) ಎಂಬವರು ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಕಳೆದ 3 ತಿಂಗಳ ಹಿಂದೆ ಗುತ್ತಿಗೆ ಪಡೆದು ಅರಂತೋಡಿನಲ್ಲಿ ವಾಸವಾಗಿದ್ದು, ತನ್ನ ಪರಿಚಯದ ಯುವತಿಯೋರ್ವಳು ತಾನು ಮಡಿಕೇರಿಯಿಂದ ಸುಳ್ಯ, ಕಡೆಗೆ ಬರುತ್ತಿದ್ದು ತನಗೆ ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಮೇರೆಗೆ ಜಲೀಲ್ ಅವರು ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ಸುಳ್ಯ ತಾಲೂಕು ತೋಡಿಕಾನಕ್ಕೆ ತೆರಳಿದ್ದರು.

ದಾರಿಯಲ್ಲಿ ಅವರನ್ನು 5 ಜನ ಆರೋಪಿಗಳು ಕಾರು ಮತ್ತು ಸ್ಕೂಟರ್ ಮೂಲಕ ಹಿಂಬಾಲಿಸಿ ಇವರ ಕಾರನ್ನು ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ ತರಳಿದ್ದಾರೆ. ಆರೋಪಿಗಳ ಪೈಕಿ ಮೂವರ ಹೆಸರು ಲತೀಶ್ ಗುಂಡ, ವರ್ಷಿತ್ ಹಾಗೂ ಪುನೀತ್ ಎಂಬುದಾಗಿ ಹಲ್ಲೆಯ ನಡೆಯುತ್ತಿದ್ದಾಗ ಇವರಿಗೆ ತಿಳಿದುಬಂದಿದೆ. ಮತ್ತಿಬ್ಬರು ಆರೋಪಿಗಳ ಪರಿಚಯ ಸಂತ್ರಸ್ಥ ವ್ಯಕ್ತಿಗೆ ತಿಳಿದುಬಂದಿಲ್ಲ.

ಪ್ರಸ್ತುತ ಇವರ ದೂರಿನ ಮೇರೆಗೆ ಸುಳ್ಯ, ಪೊಲೀಸ್ ಠಾಣೆಯಲ್ಲಿ ಅ.ಕ್ರ 87/2023 ಕಲಂ 143, 147, 341, 323, 504, 506, 153(A) ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಗಳ ಪ್ರಕಿ ಸುಳ್ಯ, ಸೊಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಿದ್ದು, ತನಿಖೆ ಪ್ರಗತಿಯಲ್ಲಿದೆ.

Related Articles

ಇತ್ತೀಚಿನ ಸುದ್ದಿಗಳು