Wednesday, June 19, 2024

ಸತ್ಯ | ನ್ಯಾಯ |ಧರ್ಮ

ಸಕಲೇಶಪುರ : ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ಕಾಡಾನೆ ‘ಭೀಮ’ನ ಗಂಭೀರ ದಾಳಿ

ಸಕಲೇಶಪುರ /ಆಲೂರು : ಸಕಲೇಶಪುರ ಆಲೂರು ತಾಲ್ಲೂಕು ಭಾಗದಲ್ಲಿ ಮತ್ತೊಂದು ಕಾಡಾನೆ ದಾಳಿ ಮಾಡಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ಗಂಭೀರವಾಗಿ ದಾಳಿ ಮಾಡಿದ ಕಾಡಾನೆ ‘ಭೀಮ’ ವೆಂಕಟೇಶ್ ಮೇಲೆ ಏಕಾಏಕಿ ಮಾಡಿದ ದಾಳಿಯಿಂದಾಗಿ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಲವು ದಿನಗಳಿಂದ ಗಾಯಗೊಂಡು ತಿರುಗಾಡುತಿದ್ದ ‘ಭೀಮ’ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು. ಇದೇ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಶಾರ್ಪ್ ಶೂಟರ್ ಗಳನ್ನು ಬಳಸಿಕೊಂಡು ಭೀಮನ ಸೆರೆ ಹಿಡಿಯಲು ಮುಂದಾಗಿದ್ದರು.

ಈ ಸಂದರ್ಭದಲ್ಲಿ ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರೆವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಮುಂದಾದಾಗ ಏಕಾಏಕಿ ಬಂದ ಕಾಡಾನೆ ವೆಂಕಟೇಶ್ ರವರನ್ನು ತುಳಿದು ಹಾಕಿದೆ. ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ದಾರೆ. ತುರ್ತು ಚಿಕಿತ್ಸೆಗಾಗಿ ವೆಂಕಟೇಶ್ ಅವರನ್ನು ಹಾಸನದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು