Friday, June 14, 2024

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಹೆಗಲ ಮೇಲೆ ಜೆಡಿಎಸ್‌ ಕೈ: ಮಹತ್ವದ ಘೋಷಣೆಗೆ ದೇವೇಗೌಡ, ಕುಮಾರಸ್ವಾಮಿ ರೆಡಿ

ಮಾಜಿ ಪ್ರಧಾನಿ, ಜೆಡಿಎಸ್ ಮುಖ್ಯಸ್ಥ ಎಚ್‌ಡಿ ದೇವೇಗೌಡ ಮತ್ತು ಅವರ ಪುತ್ರ ಕುಮಾರಸ್ವಾಮಿ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದರು.

ಸಂಸತ್ ಆವರಣದಲ್ಲಿ ಇವರ ಸಭೆ ನಡೆದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ತಿಳಿಸಿವೆ.

ಮುಂದಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಸ್ಪರ್ಧಿಸುವ ಬಗ್ಗೆ ಚರ್ಚಿಸಿಲಾಗಿದ್ದು, ಸೀಟು ಹೊಂದಾಣಿಕೆ ಬಗ್ಗೆಯೂ ಅಂತಿಮ ಚರ್ಚೆ ನಡೆದಿದೆ ಎಂದು ವರದಿಯಾಗಿದೆ. ದೇವೇಗೌಡ ಮತ್ತು ಕುಮಾರಸ್ವಾಮಿ ಶುಕ್ರವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಜೆಡಿಎಸ್‌ ಎನ್‌ಡಿಎ ಸೇರುವ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಶುಕ್ರವಾರ ಎಲ್ಲ ವಿವರ ನೀಡುವುದಾಗಿ ಕುಮಾರಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಾನಗಳ ಬಗ್ಗೆ ತಮ್ಮ ಪಕ್ಷ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಬಿಜೆಪಿ ಯಾವುದೇ ಪ್ರಸ್ತಾಪವನ್ನು ಮಾಡಿಲ್ಲ ಎಂದು ಅವರು ಹೇಳಿದರು. ತಮ್ಮ ರಾಜ್ಯದ 28 ಲೋಕಸಭಾ ಸ್ಥಾನಗಳ ಪರಿಸ್ಥಿತಿ ಮತ್ತು 2023ರ ವಿಧಾನಸಭಾ ಚುನಾವಣೆಯ ನಂತರದ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು