Saturday, June 29, 2024

ಸತ್ಯ | ನ್ಯಾಯ |ಧರ್ಮ

ಫೀರೋಜ್‌ಪುರ ಎಸ್‌ಎಸ್‌ಪಿ ಗೆ ಸುಪ್ರೀಂ ಕೋರ್ಟ್‌ ತರಾಟೆ: ಪ್ರಧಾನಿ ಭದ್ರತಾ ಉಲ್ಲಂಘನೆ ಕೇಸ್‌

ಪಂಜಾಬ್‌/ಪೀರೊಜ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಂಟಾದ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಫಿರೋಜ್‌ಪುರ ಎಸ್‌ಎಸ್‌ಪಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ತನ್ನ ಕರ್ತವ್ಯವನ್ನು ನಿರ್ವಹಿಸಲು ವಿಫಲರಾದರು ಎಂದು ಸುರ್ಪೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಜನವರಿ 2022ರಲ್ಲಿ ಪಂಜಾಬ್‌ನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಉಲ್ಲಂಘನೆಯಾಗಿತ್ತು. ಈ ವಿಚಾರವಾಗಿ ಬಿಜೆಪಿ ಹಾಗೂ ಪಂಜಾಬ್‌ನ ಕಾಂಗ್ರೆಸ್‌ ಸರ್ಕಾರದ ನಡುವೆ ವಾಗ್ವದಕ್ಕೂ ಕಾರಣವಾಗಿತ್ತು.

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್‌ ಇಂದು ಮಲ್ಹೋತ್ರಾ ಅವರ ನೇತೃತ್ವದ ಸಮಿತಿಯು ತಯಾರಿಸಿದ ವರದಿಯನ್ನು ಸುಪ್ರೀಂ ಕೋರ್ಟಿಗೆ ನೀಡಿದ್ದರು. ಅವರಿಗೆ(ಫೀರೋಜ್‌ಪುರ ಎಸ್‌ಎಸ್‌ಪಿ) ಸಾಕಷ್ಟು ಬಲವಿದ್ದರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಆ ಮಾರ್ಗವನ್ನು ಪ್ರವೇಶಿಸುತ್ತಾರೆ ಎಂದು 2 ಗಂಟೆಯ ಮೊದಲು ತಿಳಿಸಿದ್ದರೂ ಸಹ ಪ್ರಧಾನಿಗೆ ಸರಿಯಾದ ಭದ್ರತೆ ಕಲ್ಪಿಸಲು ವಿಫಲರಾಗಿದ್ದಾರೆ ಎಂದು ಐವರು ಸದಸ್ಯರ ಸಮಿತಿ ಸಲ್ಲಿಸಿದ ವರದಿ ಇದಾಗಿದೆ.

ಪ್ರಧಾನಿ ಮೋದಿಗೆ ಭದ್ರತಾ ಉಲ್ಲಂಘನೆ ಕುರಿತು ಐವರು ಸದಸ್ಯರ ಸಮಿತಿ ಸಲ್ಲಿಸಿದ್ದ ವರದಿಯನ್ನು ಓದಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು, ಫಿರೋಜ್‌ಪುರದ ಪೋಲಿಸ್‌ ವರಿಷ್ಠಾಧಿಕಾರಿ(SP)ಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಸುದ್ದಿಸಂಸ್ಥೆಯಾದ ಎಎನ್‌ಐ ವರದಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು