Saturday, June 15, 2024

ಸತ್ಯ | ನ್ಯಾಯ |ಧರ್ಮ

370ನೇ ವಿಧಿ: ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದುಹಾಕುವುದರ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ ಮತ್ತು ಇದು ಸಾಂವಿಧಾನಿಕವಾಗಿ ಸರಿಯಾಗಿದೆ ಎಂದು ಹೇಳಿದೆ.

ಕೇಂದ್ರದ ಒಪ್ಪಿಗೆಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕು ರಾಷ್ಟ್ರಪತಿಗೆ ಇದೆ ಎಂದಿರುವ ಕೋರ್ಟ್ ಇದರೊಂದಿಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆಯೂ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

2024ರ ಸೆಪ್ಟೆಂಬರ್ 30ರೊಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಆದಷ್ಟು ಬೇಗ ಮರುಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯ ಕುರಿತು ನಡೆಯುತ್ತಿರುವ ಎಲ್ಲಾ ವಿವಾದಗಳನ್ನು ಕೊನೆಗೊಳಿಸಿದ ಸುಪ್ರೀಂ ಕೋರ್ಟ್, ಈ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಮಾಡಲಾಗಿದೆ ಎಂದು ಹೇಳಿದೆ.

ಡಿಸೆಂಬರ್ 5, 2019ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಲಾತ್ತು. ಅದರ ನಂತರ ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ವಿರೋಧ ಪಕ್ಷಗಳು ಮತ್ತು ಹಲವು ಅರ್ಜಿದಾರರು ಪ್ರಶ್ನಿಸಿದ್ದರು. ಆದರೆ ಇಂದು ಸುಪ್ರೀಂ ಕೋರ್ಟ್ ಈ ಎಲ್ಲಾ ವಿವಾದಗಳಿಗೆ ಪೂರ್ಣವಿರಾಮ ಹಾಕಿದೆ.

ಆರ್ಟಿಕಲ್ 370 ರದ್ದತಿಯನ್ನು ಸಮರ್ಥಿಸಿದ ಸುಪ್ರೀಂ ಕೋರ್ಟ್, ಕೇಂದ್ರದ ಒಪ್ಪಿಗೆಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕು ರಾಷ್ಟ್ರಪತಿಗಳಿಗೆ ಇದೆ ಎಂದು ಹೇಳಿದೆ. ಹಾಗಾಗಿ ಅವರು ತೆಗೆದುಕೊಂಡಿರುವ ನಿರ್ಧಾರ ಸಂವಿಧಾನಾತ್ಮಕವಾಗಿ ಸರಿಯಾಗಿದೆ.

ಇದರೊಂದಿಗೆ ಸುಪ್ರೀಂ ಕೋರ್ಟ್ 370ನೇ ವಿಧೀಯನ್ನು ತಾತ್ಕಾಲಿಕ ಎಂದು ಕರೆದಿದೆ ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಏಕೀಕರಣಗೊಳಿಸಲು ಅದರ ನಿಬಂಧನೆಯನ್ನು ಮಾಡಲಾಗಿದೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನ ಆದೇಶದ ನಂತರ ಕಣಿವೆಯಲ್ಲಿ ಚುನಾವಣೆಗೆ ದಾರಿ ಸುಗಮವಾಗಿದೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಗಡಿಯಲ್ಲಿ ಬದಲಾವಣೆಯಾಗಿದೆ. ಈಗ 107ರ ಬದಲಿಗೆ 114 ವಿಧಾನಸಭಾ ಸ್ಥಾನಗಳಿರಲಿವೆ. ಇದರಲ್ಲಿ POK ಪ್ರದೇಶದ 24 ಸ್ಥಾನಗಳೂ ಸೇರಿವೆ.

Related Articles

ಇತ್ತೀಚಿನ ಸುದ್ದಿಗಳು