Thursday, June 20, 2024

ಸತ್ಯ | ನ್ಯಾಯ |ಧರ್ಮ

ತಂಜಾವೂರಿನಲ್ಲಿ ಮರ್ಯಾದಾ ಹತ್ಯೆ: ಮಗಳನ್ನು ಪೆಟ್ರೋಲ್‌ ಸುರಿದು ಕೊಂದ ಪೋಷಕರು

ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಮನೆಗೆ ಕರೆದುಕೊಂಡು ಹೋಗಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ತಮ್ಮ ಮರ್ಯಾದೆ ಹೋಗಿದೆ ಎಂದು ಆಕ್ರೋಶಗೊಂಡ ಪೋಷಕರು ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿದ್ದಾರೆ.

ಈ ಭಯಾನಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ತಂಜಾವೂರು ಜಿಲ್ಲೆಯ ಪೂವಲೂರಿನ ನವೀನ್ (19) ಮತ್ತು ಐಶ್ವರ್ಯ (19) ಪ್ರೀತಿಸುತ್ತಿದ್ದರು. ಇಬ್ಬರೂ ಶಾಲೆಗೆ ಹೋಗುತ್ತಿದ್ದ ದಿನಗಳಿಂದಲೂ ಪ್ರೀತಿಸುತ್ತಿದ್ದರು. ನಂತರ ತಮ್ಮ ಊರಿನಿಂದ ತಿರುಪುರಕ್ಕೆ ತೆರಳಿ ಕೆಲಸ ಮಾಡುತ್ತಿದ್ದರು.

ಮೊದಮೊದಲು ನವೀನ್ ತಿರೂರಿಗೆ ಹೋಗಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ. ನಂತರ ಐಶ್ವರ್ಯಾಳನ್ನೂ ಬೇರೆ ಖಾಸಗಿ ಕಂಪನಿಯಲ್ಲಿ ಸೇರಿಕೊಂಡ. ಇಬ್ಬರೂ ಸುಮಾರು 20 ತಿಂಗಳ ಕಾಲ ಒಂದೇ ಕೋಣೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ನಂತರ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಆದರೆ, ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದು, ಅವರ ಮದುವೆಗೆ ಪೋಷಕರು ಒಪ್ಪುವುದಿಲ್ಲ ಎಂದು ಯಾರಿಗೂ ತಿಳಿಯದಂತೆ ಕಳೆದ ವರ್ಷ 31ರಂದು ಐಶ್ವರ್ಯಾ ನವೀನ್ ಅವರನ್ನು ವಿವಾಹವಾದರು.

ಮಗಳು ಕಾಣೆಯಾಗಿದ್ದಾಳೆ ಎಂದು ಐಶ್ವರ್ಯಾ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ನವೀನ್-ಐಶ್ವರ್ಯರನ್ನು ಗುರುತಿಸಿ ಐಶ್ವರ್ಯಾಳನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಬಳಿಕ ಆಕೆಯನ್ನು ಮನೆಗೆ ಕರೆದೊಯ್ದರು. ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾಗಿ ಅವಮಾನ ಮಾಡಿದಳೆಂದು ಮಗಳ ಮೇಲೆ ಪೆಟ್ರೋಲ್ ಸುರಿದು ಕೊಂದಿದ್ದಾರೆ.

ಬಳಿಕ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಿಸಿ ಅಂತಿಮ ಸಂಸ್ಕಾರ ಮಾಡಿದ್ದಾರೆ. ಆದರೆ, ಐಶ್ವರ್ಯಾ ಅವರನ್ನು ಕೊಲೆ ಮಾಡಲಾಗಿದೆ ಎಂದು ನವೀನ್ ಪೊಲೀಸರಿಗೆ ದೂರು ನೀಡಿದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಐಶ್ವರ್ಯಾ ಪೋಷಕರನ್ನು ಬಂಧಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು