Wednesday, June 26, 2024

ಸತ್ಯ | ನ್ಯಾಯ |ಧರ್ಮ

ಫೋಕ್ಸೋ ಪ್ರಕರಣ: ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು (ಸೆ.1) ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ.

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದೂರು ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಮುರುಘಾ ಶರಣರು ಜಾಮೀನು ಕೋರಿ ಆಗಸ್ಟ್‌ 29 ರಂದು ನ್ಯಾಯಲಯದ ಮೊರೆ ಹೋಗಿದ್ದರು. ಈ ವಿಚಾರಣೆಯನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾದೀಶ ಕಲ್ಕಣಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದರು. ತಕರಾರು ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿ ವಿಚಾರಣೆಯನ್ನು ಸೆಪ್ಟಂಬರ್‌ 1 ಕ್ಕೆ ಮುಂದೂಡಲಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು