Thursday, June 13, 2024

ಸತ್ಯ | ನ್ಯಾಯ |ಧರ್ಮ

ಸ್ಟೂಡೆಂಟ್ಸ್‌ಗೆ ಒಂದು ಗುಡ್‌ ನ್ಯೂಸ್: ‘ಅಮೃತ ಮಹೋತ್ಸವ ಲ್ಯಾಪ್ ಟಾಪ್’ ಅರ್ಜಿ ಗಡುವಿನ ಅವಧಿ ವಿಸ್ತರಣೆ

ಅರ್ಜಿ ಸಲ್ಲಿಕೆ ಮತ್ತು ಅರ್ಜಿ ತಿದ್ದಪಡಿಗೆ ಇನ್ನಷ್ಟು ಕಾಲಾವಕಾಶ ನೀಡಿದ ಸರ್ಕಾರ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನಲ್ಲಿ ಅಮೃತ ಮಹೋತ್ಸವ ಲ್ಯಾಪ್ ಟಾಪ್ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ಈಗಾಗಲೇ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದು, ಸಮರ್ಪಕವಾಗಿ ಅಗತ್ಯವಿರುವ ದಾಖಲೆಗಳನ್ನು ಆನ್ ಲೈನ್ ಮುಖಾಂತರ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಹ ದಾಖಲೆಗಳನ್ನು ಅಪ್ ಲೋಡ್ ಮಾಡಲು ಕಾಲಾವಕಾಶ ನೀಡಲಾಗಿದೆ ಎಂದು ಬಿಬಿಎಮ್‌ಪಿ ಪ್ರಕಟಣೆ ತಿಳಿಸಿದೆ.

ಅದರಂತೆ, ಪಾಲಿಕೆಯ ವೆಬ್ ಸೈಟ್ https://welfare.bbmpgov.in/ ಗೆ ಭೇಟಿ ನೀಡಿ ಅರ್ಜಿಯ ಪ್ರಸ್ತುತ ಸ್ಥಿತಿ ಹಾಗೂ ಅರ್ಜಿಯ ತಿದ್ದುಪಡಿಗೆ ಭೇಟಿ ನೀಡಿ ಈಗಾಗಲೇ ಅರ್ಜಿಯಲ್ಲಿ ನಮೂದಿಸಿರುವ ಮೊಬೈಲ್ ಸಂಖ್ಯೆ ಮತ್ತು ಅರ್ಜಿ ಸಂಖ್ಯೆ ನಮೂದಿಸುವ ಮೂಲಕ ಅರ್ಜಿ ಸ್ಥಿಯನ್ನು ತಿಳಿದು ತಿದ್ದುಪಡಿ ಮಾಡಿಕೊಳ್ಳಲು ಅಥವಾ ಹೊಸದಾಗಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಈ ಕಾರ್ಯಕ್ರಮದಡಿ ಅಗತ್ಯವಾಗಿ ಬೇಕಾಗಿರುವ ದಾಖಲೆಗಳನ್ನು ಅಪ್ ಲೋಡ್ ಮಾಡಲು ದಿನಾಂಕ: 19.02.2024ರಿಂದ ದಿನಾಂಕ: 29.02.2024ರ ವರೆಗೆ ಕಾಲಾವಕಾಶವನ್ನು ಮತ್ತೊಮ್ಮೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅಂತಿಮ ದಿನಾಂಕದ ನಂತರ ಅಗತ್ಯ ದಾಖಲೆಗಳು ಸಲ್ಲಿಕೆಯಾಗದೇ ಇರುವಂತಹ ಅರ್ಜಿಗಳನ್ನು ಅನರ್ಹವೆಂದು ಪರಿಗಣಿಸಲಾಗುವುದು ಎಂದೂ ಹೇಳಲಾಗಿದೆ.

ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ವಲಯದ ಸಹಾಯಕ ಕಂದಾಯ ಅಧಿಕಾರಿಯನ್ನು ಸಂಪರ್ಕಿಸಬಹುದೆಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

ಈ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಶ್ರೀ ಭಿಮಾ ಶಂಕರ್, ಸಹಾಯಕ ಆಯುಕ್ತರು, ಕಲ್ಯಾಣ ವಿಭಾಗ, ಬಿಬಿಎಂಪಿ. ಇವರನ್ನು ಮೊ.ಸಂ: 9480683063 ಮೂಲಕ ಸಂಪರ್ಕಿಸಬಹುದು.

Related Articles

ಇತ್ತೀಚಿನ ಸುದ್ದಿಗಳು