Friday, June 14, 2024

ಸತ್ಯ | ನ್ಯಾಯ |ಧರ್ಮ

ಅಬಕಾರಿ ನೀತಿ ಪ್ರಕರಣ : ಕೇಜ್ರಿವಾಲ್ ಗೆ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ಹಲವು ಸಮನ್ಸ್ ಗಳನ್ನು ನಿರ್ಲಕ್ಷ್ಯಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಈಡಿ) ನೀಡಿದ ಎರಡು ದೂರುಗಳ ಆಧಾರದ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಖುದ್ದು ಹಾಜರಾಗುವಂತೆ ರೋಸ್ ಅವೆನ್ಯೂ ಕೋರ್ಟ್ ಸೂಚಿಸಿತ್ತು.

ಭಾರೀ ಭದ್ರತೆಯ ನಡುವೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ಅವರ ವಕೀಲ ರಮೇಶ್ ನ್ಯಾಯಾಲಯದ ಮುಂದೆ ಹಾಜರಾದರು.

ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ನ್ಯಾಯಾಲಯವು 15,000 ರೂಪಾಯಿ ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು