Sunday, June 16, 2024

ಸತ್ಯ | ನ್ಯಾಯ |ಧರ್ಮ

ಪ್ರಜ್ವಲ್‌ ರೇವಣ್ಣನನ್ನು‌ ಜೂನ್‌ 6ರ ತನಕ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿದ ಕೋರ್ಟ್

ಬೆಂಗಳೂರು: ಹಾಸನದಲ್ಲಿ ನಡೆದ ಸರಣಿ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಬೆಂಗಳೂರು ನ್ಯಾಯಾಲಯ ಶುಕ್ರವಾರ ಅತ್ಯಾಚಾರ ಆರೋಪಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನು ಜೂನ್ 6ರವರೆಗೆ ಕಸ್ಟಡಿಗೆ ನೀಡಿದೆ.

ಶುಕ್ರವಾರ ಮಧ್ಯಾಹ್ನ ಪ್ರಜ್ವಲನನ್ನು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಮುಂದೆ ಹಾಜರುಪಡಿಸಿದ ನಂತರ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ಮ್ಯಾಜಿಸ್ಟ್ರೇಟ್ ನಂತರ ಕಸ್ಟಡಿಗೆ ನೀಡಲಾಯಿತು.

ಶುಕ್ರವಾರ ಮಧ್ಯರಾತ್ರಿ 12.53ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್‌ನನ್ನು ಎಸ್‌ಐಟಿ ಅಧಿಕಾರಿಗಳ ತಂಡ ಬಂಧಿಸಿದೆ. ಪ್ರಜ್ವಲ್ ಜರ್ಮನಿಯ ಮ್ಯೂನಿಚ್‌ನಿಂದ ಒಂದು ತಿಂಗಳ ಕಾಲ ಬಂಧನವನ್ನು ತಪ್ಪಿಸಿಕೊಂಡು ನಂತರ ಹಿಂತಿರುಗಿದ್ದ. ಮೂರು ಪ್ರತ್ಯೇಕ ಪ್ರಕರಣಗಳಲ್ಲಿ, ಸಂಸದನ ಮೇಲೆ ಲೈಂಗಿಕ ಕಿರುಕುಳ ಮತ್ತು ಅರವತ್ತರ ಹರೆಯದ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪವಿದೆ.

ನಗರದ ಸಿಐಡಿ ಮುಖ್ಯ ಕಚೇರಿಯಿರುವ ಎಸ್‌ಐಟಿ ಕಚೇರಿಯಲ್ಲಿ ಹೋಲ್ಡಿಂಗ್ ಸೆಲ್‌ನಲ್ಲಿ ರಾತ್ರಿ ಕಳೆದ ನಂತರ, ಪ್ರಜ್ವಲನನ್ನು ಹಗಲಿನಲ್ಲಿ ವೈದ್ಯಕೀಯ ತಪಾಸಣೆಗಾಗಿ ಶಿವಾಜಿ ನಗರದ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.

Related Articles

ಇತ್ತೀಚಿನ ಸುದ್ದಿಗಳು