Wednesday, July 3, 2024

ಸತ್ಯ | ನ್ಯಾಯ |ಧರ್ಮ

ಹತ್ರಾಸ್ ದುರಂತ : ಹೆಣಗಳ ರಾಶಿ ನೋಡಿ ಪೊಲೀಸ್‌ ಗೆ ಹೃದಯಾಘಾತ

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಿನ್ನೆ ನಡೆದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿದೆ. ಈ ನಡುವೆ ಹೆಣಗಳ ರಾಶಿ ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಹತ್ರಾಸ್ ನ ಪುಲ್ರೈ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಆರಂಭದಲ್ಲಿ ಸರಾಗವಾಗಿಯೇ ನಡೆದಿದ್ದ ಕಾರ್ಯಕ್ರಮ ಕೊನೇ ಹಂತದಲ್ಲಿ ದುರಂತಕ್ಕೆ ಕಾರಣವಾಗಿದೆ.

ಭೋಲೆ ಬಾಬಾ ಅವರ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸತ್ಸಂಗದ ಪ್ರಚಾರಕರು ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆಯೇ ಬಾಬಾ ಅವರಿಗೆ ನಮಸ್ಕರಿಸಲೆಂದು ಕೆಲ ಭಕ್ತರು ಪ್ರಯತ್ನಿಸಿದ್ದಾರೆ. ಇದೇ ವೇಳೆ ಕೆಲ ಭಕ್ತರ ಸಮೂಹ ಬಾಬಾ ಅವರನ್ನು ಸ್ಪರ್ಶಿಸಲು ಅವರತ್ತ ನುಗ್ಗಿದೆ. ಈ ವೇಳೆ ನೂಕು ನುಗ್ಗಲು ಆರಂಭವಾಗಿದೆ.

ಸ್ವಯಂ ಸೇವಕರು ಭಕ್ತರನ್ನು ತಡೆಯಲು ಯತ್ನಿಸಿದ್ದಾರೆ ಆದರೆ ಅಪಾರ ಜನಸಂಖ್ಯೆ ಇದ್ದುದರಿಂದ ಸಾಧ್ಯವಾಗಿಲ್ಲ. ಹಲವು ಭಕ್ತರು ಕೆಳಗೆ ಬಿದ್ದಿದ್ದಾರೆ. ಮೇಲೇಳಲು ಸಾಧ್ಯವಾಗದೇ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ.

ನಿನ್ನೆಯಿಂದ ಇಂದಿನ ವರೆಗೂ ಸಾವನ್ನಪ್ಪಿದವರ ಸಂಖ್ಯೆ 116 ದಾಟಿದ್ದು, ಗಂಭೀರ ಗಾಯವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಹತ್ರಾಸ್ ಜಿಲ್ಲಾಸ್ಪತ್ರೆಯಲ್ಲಿ ರಆಶಿ ಬಿದ್ದ ಹೆಣಗಳನ್ನು ನೋಡಿ, ಪೊಲೀಸ್ ಕಾನಸ್ಟೇಬಲ್ ಮೃತಪಟ್ಟಿದ್ದಾರೆ.

ರಜನೀಶ್‌ ಎಂಬ ಪೊಲೀಸ್‌ ಕಾನ್ಸ್‌ಟೇಬಲ್‌ ಹೃಯಘಾತಕ್ಕೆ ಬಲಿಯಾದವರು. ಇವರನ್ನು ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಭದ್ರತೆಗೆ ನಿಯೋಜಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳ ರಾಶಿ ಹಾಕಲಾಗಿತ್ತು. ಅದನ್ನು ನೋಡುತ್ತಿದ್ದಂತೆ ರಜನೀಶ್‌ಗೆ ಹೃದಯಾಘಾತವಾಗಿದ್ದು, ಅವರು ಅಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು