Saturday, September 28, 2024

ಸತ್ಯ | ನ್ಯಾಯ |ಧರ್ಮ

ಕುಸಿದ ಉಜ್ಜಯಿನಿ ಮಹಾಕಾಲ ದೇವಸ್ಥಾನದ ಗೋಡೆ. ಅವಶೇಷಗಳಡಿ ಸಿಲುಕಿದ ಹಲವರು

ಕಳೆದ ಕೆಲವು ದಿನಗಳಿಂದ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ಶುಕ್ರವಾರ ಸಂಜೆ ಉಜ್ಜಯಿನಿಯ ಮಹಾಕಾಲ ದೇವಾಲಯದ ಗಡಿ ಗೋಡೆ ಕುಸಿದಿದೆ.

ಈ ಅವಘಡದಲ್ಲಿ ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ನಾಲ್ಕನೇ ನಂಬರ್ ಗೇಟ್ ಬಳಿ ನಿರ್ಮಿಸಿದ್ದ ಗೋಡೆ ಕುಸಿದಿದೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ರಕ್ಷಣಾ ತಂಡವು ಸ್ಥಳಕ್ಕೆ ಧಾವಿಸಿ ರಕ್ಷಣಾ ಕ್ರಮಗಳನ್ನು ಕೈಗೊಂಡಿದೆ.

ಅವಶೇಷಗಳಡಿಯಿಂದ ಹಲವರನ್ನು ತೆಗೆಯಲಾಯಿತು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅವಶೇಷಗಳಡಿ ಎಷ್ಟು ಮಂದಿ ಇದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಎನ್ನುತ್ತಾರೆ ಅಧಿಕಾರಿಗಳು. 10ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏತನ್ಮಧ್ಯೆ, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page