Tuesday, October 8, 2024

ಸತ್ಯ | ನ್ಯಾಯ |ಧರ್ಮ

ಕಂಗನಾ ರಣಾವತ್‌ಗೆ ಜಬಲ್‌ಪುರ ವಿಶೇಷ ನ್ಯಾಯಾಲಯದಿಂದ ನೋಟಿಸ್

ಮಧ್ಯಪ್ರದೇಶದ ನ್ಯಾಯಾಲಯವು ಬಾಲಿವುಡ್ ಸ್ಟಾರ್ ನಟಿ ಮತ್ತು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರನೌತ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

2014ರಲ್ಲಿ ಮೋದಿ ಪ್ರಧಾನಿಯಾದ ಬಳಿಕ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಎಂದು ಈ ಹಿಂದೆ ಕಂಗನಾ ಹೇಳಿದ್ದರು. ಈ ಹೇಳಿಕೆ ಆ ಸಮಯದಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. ಆ ಸಂದರ್ಭದಲ್ಲಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಹಲವು ಮುಖಂಡರು ಒತ್ತಾಯಿಸಿದ್ದರು. ಅಲ್ಲದೆ ಕಂಗನಾ ಹೇಳಿಕೆಯ ವಿರುದ್ಧ ವಕೀಲ ಅಮಿತ್ ಕುಮಾರ್ ಸಾಹು ಪೊಲೀಸ್ ದೂರು ದಾಖಲಿಸಿದ್ದರು.

ಅಧರ್ತಾಲ್ ಪೊಲೀಸರು ಅವರ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ, ಅವರು 2021ರಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದರು. ಪ್ರಕರಣವನ್ನು ಇತ್ತೀಚೆಗೆ ಜಬಲ್ಪುರದ ವಿಶೇಷ ಸಂಸದ-ಶಾಸಕ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

ಈ ಬಗ್ಗೆ ತನಿಖೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶ್ವೇಶ್ವರ ಮಿಶ್ರಾ ಅವರು ಕಂಗನಾಗೆ ನೋಟಿಸ್ ಜಾರಿ ಮಾಡಿದ್ದಾರೆ. ಬಳಿಕ ಮುಂದಿನ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಲಾಯಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page