Wednesday, November 13, 2024

ಸತ್ಯ | ನ್ಯಾಯ |ಧರ್ಮ

ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ; 97 ಮಂದಿಗೆ ಜಾಮೀನು ಮಂಜೂರು

ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98 ಮಂದಿಯಲ್ಲಿ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಜಾಮೀನು ಮಂಜೂರು ಮಾಡಿದೆ.

ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಪ್ರಕರಣದ ಎ1 ಆರೋಪಿ ಮಂಜುನಾಥ್ ಹೊರತುಪಡಿಸಿ 97 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಮಂಜುನಾಥ್ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ.

ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತು ಪಡಿಸಿ ಉಳಿದೆಲ್ಲರಿಗೂ ಜಾಮೀನು ಮುಂಜೂರು ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page