Friday, June 14, 2024

ಸತ್ಯ | ನ್ಯಾಯ |ಧರ್ಮ

ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ಸಾರಾ ಮಹೇಶ್

ಮೈಸೂರು: ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಶಾಸಕ ಸಾರಾ ಮಹೇಶ್‌ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ್ದು, ಸುಳ್ಳಾಗಿದ್ದರಿಂದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಸಾರಾ ಮಹೇಶ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆ ಆರ್‌ ನಗರ ಶಾಸಕ ಸಾರಾ ಮಹೇಶ್‌ ಅವರು, ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯವರು ಈ ಹಿಂದೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ನನ್ನ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ್ದರು. ಅದನ್ನು ಪ್ರಾದೇಶಿಕ ಆಯುಕ್ತರು ಪರೀಶೀಲನೆ ನಡೆಸಿ ಆರೋಪ ಸುಳ್ಳು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ನ್ಯಾಯಲಯದಲ್ಲಿ 1 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು