Tuesday, December 10, 2024

ಸತ್ಯ | ನ್ಯಾಯ |ಧರ್ಮ

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಎಸ್ಎಂ ಕೃಷ್ಣ ವಿಧಿವಶರಾಗಿದ್ದಾರೆ.

92 ವರ್ಷಗಳ ಎಸ್ ಎಂ ಕೃಷ್ಣ ಹಲವು ದಿನಗಳ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾದ ಅವರು 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ, ನೆರೆಯ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

ತಮ್ಮ ಬಹುಕಾಲದ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡು , ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.[೧] ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page