Saturday, January 4, 2025

ಸತ್ಯ | ನ್ಯಾಯ |ಧರ್ಮ

ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಜ.8 ರಂದು ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟ

ಹಾಸನ : ಭಾರತದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಗೃಹ ಸಚಿವ, ಮನುವಾದಿ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸುವAತೆ ಆಗ್ರಹಿಸಿ ಜನವರಿ 8 ರಂದು ಬೆಳಿಗ್ಗೆ 11 ಗಂಟೆಗೆ ಹಾಸನದಲ್ಲಿ ರಾಷ್ಟಿಯ ಹೆದ್ದಾರಿ ತಡೆದು ಬೃಹತ್ ಹೋರಾಟ ಮಾಡಲಾಗುವುದು, ಈ ವೇಳೆ ಜೈಲಿಗೆ ಬೇಕಾದರೂ ಕಳುಹಿಸಿದರೇ ಹೋಗಲು ಸಿದ್ದರಾಗಿದ್ದೇವೆ ಎಂದು ಹಿರಿಯ ದಲಿತ ಮುಖಂಡ ಹೆಚ್.ಕೆ. ಸಂದೇಶ್ ಮತ್ತು ಸಿಪಿಐಎಂ ಮುಖಂಡರಾದ ಧರ್ಮೇಶ್ ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಡಿರುವ ಅಪಮಾನಕರ ಮಾತುಗಳು ಅತ್ಯಂತ ಖಂಡನೀಯವಾದುದು. ಈ ಮಾತುಗಳು ಅಮಿತ್ ಶಾ ಅವರ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಹಾಗೂ ಅವರು ಹಿಂದೆಯೂ ಈಗಲೂ ಮುಂದೆಯೂ ಬಾಬಾಸಾಹೇಬರನ್ನು ಒಪ್ಪಿಕೊಳ್ಳುವುದಿಲ್ಲ ಎನ್ನುವುದು ಸಾಬೀತಾಗುತ್ತದೆ. ಇಂತಹ ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ‘ಮುಂದುವರಿದರೆ ಡಾ.ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಅವರ ಆಶಯಗಳಿಗೆ ವಿರುದ್ಧವಾಗುತ್ತದೆ. ಹಾಗೂ ಭಾರತದ ಸಂವಿಧಾನದ ಮೂಲ ತತ್ವಗಳಿಗೆ ದಕ್ಕೆಯಾಗುತ್ತದೆ ಎಂದರು. ಭಾರತದ ಸಂವಿಧಾನದ 75ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿಯೇ ಭಾರತದ ಸಂವಿಧಾನ ಶಿಲ್ಪಿ ಬಾಬಾಸಾಹೆಬ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಅಮಿತ್ ಶಾ ಅವರು ಆಡಿರುವ ಅಪಮಾನಕರ ಮಾತುಗಳು ಕೇವಲ ಆಕಸ್ಮಿಕವೇನೂ ಅಲ್ಲ. ಸಂವಿಧಾನದ ಕುರಿತು ಚರ್ಚೆಯ ಸಂದರ್ಭದಲ್ಲಿಯೇ ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿತ್ತು. ಅಮಿತ್ ಶಾ ಪ್ರತಿನಿಧಿಸುವ ಆರ್‌ಎಸ್‌ಎಸ್, ಜನಸಂಘ ಮತ್ತು ಬಿಜೆಪಿ ಭಾರತವನ್ನು ಸಾರ್ವಭೌಮ, ಸಮಾಜವಾದಿ, ಮತಧರ್ಮ ನಿರಪೇಕ್ಷ, ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ದೇಶದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಆರಂಭದಿAದಲೂ ತೀವ್ರ ಅಸಮಾಧಾನ ಮತ್ತು ಅತೃಪ್ತಿಯನ್ನು ಹೊರಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ ಎಂದು ಹೇಳಿದರು. ಅಂಬೇಡ್ಕರ್ ಅವರ ಜಾತಿ ಹಿನ್ನೆಲೆಯನ್ನು ಎತ್ತಿ ತೋರಿಸುತ್ತಾ ಅಂಬೇಡ್ಕರ್ ಅವರು ಸಂವಿಧಾನ ಬರೆಯಲೇ ಇಲ್ಲ ಎನ್ನುವ ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್‌ಎಸ್‌ಎಸ್ ಆಗ ಬಹಿರಂಗವಾಗಿಯೇ ಹೇಳಿತ್ತು. ಅಂತಹ ಸಂಘಪರಿವಾರ ಮತ್ತು ಬಿಜೆಪಿಯ ಅಮಿತ್ ಶಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ಅಪಮಾನಕರವಾದ ಮಾತುಗಳು ಅವರ ಮನುವಾದಿ ಪರಂಪರೆಯ ಮುಂದುವರಿಕೆಯ ಭಾಗವಾಗಿಯೇ ಬಂದಿವೆ. ಇದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಭಾರತದ ಸಂವಿಧಾನಕ್ಕೆ ಆಗಿರುವ ಅತ್ಯಂತ ಘೋರ ಅಪಮಾನವಾಗಿದೆ ಎಂದು ದೂರಿದರು


ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ, ಮನುವಾದಿ ಅಮಿತ್ ಶಾ ಅವರನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಅವಮಾನಿಸಿದ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕೆAದು ಆಗ್ರಹಿಸಿ ಹಾಸನ ಜಿಲ್ಲಾ ದಲಿತ-ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ 2025 ಜನವರಿ 8 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಹಾಸನದಲ್ಲಿ ರಾಷ್ಟಿಯ ಹೆದ್ದಾರಿ ತಡೆ” ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಈ ಹೋರಾಟಕ್ಕೆ ದಲಿತ, ಜನಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಸಂವಿಧಾನ ಹಾಗೂ ಬಾಬಾಸಾಹೇಬರ ವಿಚಾರಗಳನ್ನು ಒಪ್ಪುವ ಸಮಾನ ಮನಸ್ಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಿಪಿಐಎಂ ಮುಖಂಡ ಧರ್ಮೇಶ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯಕುಮಾರ್, ಹಿರಿಯ ದಲಿತ ಮುಖಂಡ ರಾಜಶೇಖರ್, ಅಲ್ಪಸಂಖ್ಯಾತ ಮುಖಂಡರು ಸಮೀರ್ ಅಹಮದ್, ದಸಂಸ ಮುಖಂಡರು ಅಂಬುಗ ಮಲ್ಲೇಶ್, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ ಇತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page