Friday, February 21, 2025

ಸತ್ಯ | ನ್ಯಾಯ |ಧರ್ಮ

ಕುಂಭಮೇಳ ಎಫೆಕ್ಟ್; ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯದ 6 ಮಂದಿ ಸಾ*ವು

ಉತ್ತರ ಪ್ರದೇಶದಲ್ಲಿ ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ 6 ಮಂದಿ ಭಕ್ತರು ರಾಜ್ಯದ ಬೀದರ್ ಜಿಲ್ಲೆಯವರು ಎಂದು ತಿಳಿದು ಬಂದಿದೆ.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೀದರ್ ಜಿಲ್ಲೆಯ ಐವರು ತೆರಳಿದ್ದರು. ಈ ವೇಳೆ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 5 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಉತ್ತರಪ್ರದೇಶದ ರೂಪಾಪೂರ ಬಳಿ ಲಾರಿಗೆ ಈ ಕ್ರೂಜರ್ ಡಿಕ್ಕಿಯಾಗಿದೆ. ಲಾರಿ ಕ್ರೂಜರ್ ನಡುವೆ ಡಿಕ್ಕಿಯಾಗಿ ಬೀದರ್ ಜಿಲ್ಲೆಯ ಲಾಡಿಗೇರ ಬಡಾವಣೆ ನಿವಾಸಿಗಳು ಐದು ಜನ ಸಾವನಪ್ಪಿದ್ದಾರೆ. ಸುನೀತಾ, ಸಂತೋಷ ಹಾಗೂ ನೀಲಮ್ಮ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಉಳಿದ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕುಂಭಮೇಳ ಮುಗಿಸಿ ಕಾಶಿ ವಿಶ್ವನಾಥನ ದರ್ಶನಕ್ಕೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page