Wednesday, March 5, 2025

ಸತ್ಯ | ನ್ಯಾಯ |ಧರ್ಮ

ಹಿಂದಿ ಹೇರುವ ಮೂಲಕ ಬಿಜೆಪಿ ದಕ್ಷಿಣ ಭಾರತದಲ್ಲಿ ಚುನಾವಣೆ ಗೆಲ್ಲಲು ಪ್ರಯತ್ನಿಸುತ್ತಿದೆ: ನಟ ಕಮಲ್ ಹಾಸನ್ ತೀವ್ರ ಟೀಕೆ

ದಕ್ಷಿಣ ರಾಜ್ಯಗಳನ್ನು ಹಿಂದಿ ರಾಜ್ಯಗಳನ್ನಾಗಿ ಪರಿವರ್ತಿಸುವ ಮೂಲಕ ಬಿಜೆಪಿ ಗೆಲ್ಲಲು ಪ್ರಯತ್ನಿಸುತ್ತಿದೆ ಎಂದು ಕಮಲ್ ಹಾಸನ್ ಆರೋಪಿಸಿದ್ದಾರೆ.

ಹಿಂದಿಯೇತರ ರಾಜ್ಯಗಳು ಹಿಂದಿಯನ್ನು ತಮ್ಮ ಭಾಷೆಯಾಗಿ ಅಳವಡಿಸಿಕೊಳ್ಳುವಂತೆ ಕೇಂದ್ರವು ಒತ್ತಾಯಿಸುತ್ತಿದೆ ಎಂದು ಅವರು ಹೇಳಿದರು.

ಸ್ಟಾಲಿನ್ ಬುಧವಾರ ಕ್ಷೇತ್ರ ಪುನರ್ವಿಂಗಡಣೆ ಕುರಿತು ಸರ್ವಪಕ್ಷ ಸಭೆ ಕರೆದಿದ್ದರು. ಈ ಸಭೆಯಲ್ಲಿ ಕಮಲ್ ಹಾಸನ್ ಕೂಡ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಮಲ್ ಹಾಸನ್ ಕೇಂದ್ರದ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ವಿಷಯದ ಕುರಿತು ನಡೆದ ಸರ್ವಪಕ್ಷ ಸಭೆಯಲ್ಲಿ ಸ್ಟಾಲಿನ್ ಮಾತನಾಡುತ್ತಿದ್ದರು. 1971ರ ಜನಗಣತಿಯ ಆಧಾರದ ಮೇಲೆ ವಿಭಜನಾ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ಸ್ಟಾಲಿನ್ ಕೇಂದ್ರವನ್ನು ವಿನಂತಿಸಿದರು. ಪ್ರಸ್ತುತ ಜನಸಂಖ್ಯೆಯನ್ನು ಆಧರಿಸಿ ಮಾಡಿದರೆ ರಾಜ್ಯವು ಸಂಸತ್ತಿನಲ್ಲಿ 12 ಸ್ಥಾನಗಳನ್ನು ಕಳೆದುಕೊಳ್ಳಲಿಗೆ ಮತ್ತು ಕೇವಲ 10 ಸ್ಥಾನಗಳಷ್ಟೇ ಉಳಿಯಲಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದು ತಮಿಳು ರಾಜಕೀಯದ ಮೇಲಿನ ನೇರ ದಾಳಿ ಎಂದು ಅವರು ಹೇಳಿದ ಅವರು, ಈ ಕ್ರಮವು ರಾಜ್ಯದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು.

ಸರ್ವಪಕ್ಷ ಸಭೆಯಲ್ಲಿ 2026 ರ ಜನಗಣತಿ ಆಧರಿಸಿ ವಿಭಜನಾ ಪ್ರಕ್ರಿಯೆ ನಡೆಸಬಾರದು ಎಂದು ಒತ್ತಾಯಿಸಿದರು. ಈ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ.

ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ಈ ಚುನಾವಣೆಗೆ ಸಿದ್ಧತೆ ನಡೆಸುತ್ತಿವೆ. ಅದೇ ರೀತಿ, ನಟ ಮತ್ತು ಟಿವಿಕೆ ಅಧ್ಯಕ್ಷ ವಿಜಯ್ ಕೂಡ ಚುನಾವಣೆಗೆ ಸಿದ್ಧರಾಗುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page