Friday, May 9, 2025

ಸತ್ಯ | ನ್ಯಾಯ |ಧರ್ಮ

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ ; ಗಂಗಾವತಿಯಲ್ಲಿ ಮತ್ತೆ ಬೈ ಎಲೆಕ್ಷನ್!

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದ ಅಡಿಯಲ್ಲಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಅವರ ಶಾಸಕ ಸ್ಥಾನವೂ ಅನರ್ಹಗೊಂಡಿದೆ. ಇತ್ತ ಚಂಚಲಗುಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಎರಡೆರಡು ಆಘಾತ ಎದುರಾಗಿದೆ.

ಸಧ್ಯ ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅನರ್ಹಗೊಂಡ ನಂತರ ಗಂಗಾವತಿ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಜನಾರ್ದನ ರೆಡ್ಡಿಯಿಂದ ತೆರವಾದ ಶಾಸಕ ಸ್ಥಾನಕ್ಕೆ ಬಿಜೆಪಿ ಯಾರನ್ನು ತಂದು ಕೂರಿಸಲಿದೆ ಎಂಬ ಪ್ರಶ್ನೆ ಎದುರಾಗಿದೆ. ಈ ನಡುವೆ ಕಾಂಗ್ರೆಸ್ ಕೂಡ ಅಭ್ಯರ್ಥಿ ಆಯ್ಕೆಗೆ ಇಂದಿನಿಂದಲೇ ತೆರೆಮರೆಯಲ್ಲಿ ತಯಾರಿ ನಡೆಸಿದೆ. ಕಾಂಗ್ರೆಸ್ ನಿಂದ ಬಹುತೇಕ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಣಕ್ಕಿಳಿಯುವ ಬಗ್ಗೆಯೂ ಮಾತುಕತೆ ನಡೆದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page