Monday, May 19, 2025

ಸತ್ಯ | ನ್ಯಾಯ |ಧರ್ಮ

ಜವಳಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ: ಮಾಲಿಕ ಸೇರಿ ಎಂಟು ಜನರು ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಕೈಗಾರಿಕಾ ಕೇಂದ್ರವಾದ ಸೋಲಾಪುರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ಸೋಲಾಪುರದ ಎಂಐಡಿಸಿಯಲ್ಲಿರುವ ಸೆಂಟ್ರಲ್ ಟೆಕ್ಸ್‌ಟೈಲ್ ಮಿಲ್‌ನಲ್ಲಿ ಬೆಳಗಿನ ಜಾವ 3.45ಕ್ಕೆ ಬೆಂಕಿ ಕಾಣಿಸಿಕೊಂಡಿತು.

ಕ್ರಮೇಣ, ಬೆಂಕಿ ಕಾರ್ಖಾನೆ ಪೂರ್ತಿ ಹರಡಿ, ಭಾರಿ ಬೆಂಕಿಗೆ ಕಾರಣವಾಯಿತು. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಅವರು ಹೇಳಿದ್ದಾರೆ.

ಬೆಂಕಿಯಲ್ಲಿ ಎಂಟು ಜನರು ಮೃತರಾಗಿದ್ದಾರೆ ಎಂದು ಹೇಳಲಾಗಿದೆ. ಅವರಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಇರುವುದು ಬೆಳಕಿಗೆ ಬಂದಿದೆ. ಮೃತರಲ್ಲಿ ಕಾರ್ಖಾನೆ ಮಾಲೀಕರು, ಅವರ ಒಂದೂವರೆ ವರ್ಷದ ಮೊಮ್ಮಗ ಮತ್ತು ಮೂವರು ಕುಟುಂಬ ಸದಸ್ಯರು ಸೇರಿದ್ದಾರೆ.

ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಜ್ವಾಲೆಯಿಂದಾಗಿ ಬೆಂಕಿಯನ್ನು ನಿಯಂತ್ರಿಸಲು 5ರಿಂದ 6 ಗಂಟೆಗಳು ಬೇಕಾಯಿತು ಎಂದು ಅಧಿಕಾರಿಗಳು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page