Thursday, June 5, 2025

ಸತ್ಯ | ನ್ಯಾಯ |ಧರ್ಮ

ಸ್ಪೀಕರ್ ಯು.ಟಿ. ಖಾದರ್ ಕಾಂಗ್ರೆಸ್ ಏಜೆಂಟ್‌ ರೀತಿ ವರ್ತಿಸುತ್ತಿದ್ದಾರೆ: ಅರವಿಂದ ಬೆಲ್ಲದ್ ಆರೋಪ

ಹುಬ್ಬಳ್ಳಿ: ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಕಾಂಗ್ರೆಸ್ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ ಎಂದು ವಿಧಾನಸಭಾ ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯು.ಟಿ. ಖಾದರ್ ಯಾವುದೇ ಪಕ್ಷಕ್ಕೆ ಸೀಮಿತವಾಗಿರಬಾರದು. ಆದರೆ, ಅವರು ದಕ್ಷಿಣ ಕನ್ನಡ ಜಿಲ್ಲೆಯನ್ನು ತಮ್ಮ ರಿಪಬ್ಲಿಕ್ ಆಗಿ ಮಾಡಿಕೊಂಡಿದ್ದಾರೆ. ಅದೇ ರೀತಿ, ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ, ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿಯಲ್ಲಿ ಬಿ.ಕೆ. ಹರಿಪ್ರಸಾದ್, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸರ್ವಾಧಿಕಾರಿ ವರ್ತನೆ ಪ್ರದರ್ಶಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ರಾಜ್ಯದ ಪ್ರತಿಯೊಂದು ಜಿಲ್ಲೆಯೂ ಕಾಂಗ್ರೆಸ್ ಸಚಿವರ ರಿಪಬ್ಲಿಕ್ ಆಗಿವೆ. ಛಲವಾದಿ ನಾರಾಯಣ ಸ್ವಾಮಿ, ಹರೀಶ್ ಪೂಂಜ, ಸಿ.ಟಿ. ರವಿ ಸೇರಿದಂತೆ ಹಲವರ ವಿರುದ್ಧ ಆಧಾರರಹಿತ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ, ಗೃಹ ಸಚಿವರು ಈ ವಿಷಯದಲ್ಲಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ” ಎಂದು ಅರವಿಂದ ಬೆಲ್ಲದ್ ಟೀಕಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page