Tuesday, June 10, 2025

ಸತ್ಯ | ನ್ಯಾಯ |ಧರ್ಮ

ಪೊಲೀಸರ ಗೂಂಡಾ ವರ್ತನೆ ನಿಲ್ಲಲಿ: ವಿಜಯೇಂದ್ರ

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆಯು ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾನ್ಯ ಜನರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಪೊಲೀಸರು ರಾತ್ರಿ 3 ಗಂಟೆಗೆ ಹಿಂದೂ ಕಾರ್ಯಕರ್ತರ ಮನೆಗೆ ನುಗ್ಗಿ, ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಆಕ್ಷೇಪಿಸಿರುವ ವಿಜಯೇಂದ್ರ, ಈ ಗೂಂಡಾ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಪೊಲೀಸರ ಈ ಕೃತ್ಯದ ವಿರುದ್ಧ ಕಟ್ಟುನಿಟ್ಟಾದ ಕ್ರಮಕ್ಕೆ ಒತ್ತಾಯಿಸಿದ್ದಾರೆ. “ಕಾಂಗ್ರೆಸ್ ಸರ್ಕಾರ ಧರ್ಮದ ಹೆಸರಿನಲ್ಲಿ ದುಷ್ಟ ಶಕ್ತಿಗಳಿಗೆ ಆಶ್ರಯ ನೀಡುತ್ತಿದೆ. ಹಿಂದೂ ಕಾರ್ಯಕರ್ತರನ್ನು ಬಂಧಿಸಿ, ಗಡಿಪಾರು ಮಾಡಿ, ಸುಳ್ಳು ಕೇಸುಗಳನ್ನು ಹಾಕಿ ದೌರ್ಜನ್ಯ ನಡೆಸುತ್ತಿದೆ. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಡಿ.ವಿ. ಸದಾನಂದ ಗೌಡ, “ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕೊಲೆ, ಸುಲಿಗೆ, ದರೋಡೆ, ಮತ್ತು ಅತ್ಯಾಚಾರದಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಜನಸಾಮಾನ್ಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಸರಕಾರ ವಿಫಲವಾಗಿದೆ” ಎಂದು ಟೀಕಿಸಿದ್ದಾರೆ.

ವಿಜಯೇಂದ್ರ ಅವರು ಪೊಲೀಸರ ಈ ರೀತಿಯ ಕೃತ್ಯಗಳಿಗೆ ಬಿಜೆಪಿಯು ಕೈಕಟ್ಟಿ ಕೂರದಿರುವುದಾಗಿ ಎಚ್ಚರಿಕೆ ನೀಡಿದ್ದಾರೆ. “ಪೊಲೀಸರ ಮೂಲಕ ಗೂಂಡಾಗಿರಿ ಮಾಡಿದರೆ, ಬಿಜೆಪಿ ತಕ್ಕ ಪ್ರತಿರವನ್ನು ನೀಡಲಿದೆ,” ಎಂದು ಅವರು ಘೋಷಿಸಿದ್ದಾರೆ.

ಈ ಘಟನೆಯ ಕುರಿತು ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ಏರ್ಪಡುವ ಸಾಧ್ಯತೆ ಇದೆ. ಪೊಲೀಸರ ವರ್ತನೆಯನ್ನು ಸರಿಪಡಿಸಿ, ಜನರಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆಯು ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾನ್ಯ ಜನರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಪೊಲೀಸರು ರಾತ್ರಿ 3 ಗಂಟೆಗೆ ಹಿಂದೂ ಕಾರ್ಯಕರ್ತರ ಮನೆಗೆ ನುಗ್ಗಿ, ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಆಕ್ಷೇಪಿಸಿರುವ ವಿಜಯೇಂದ್ರ, ಈ ಗೂಂಡಾ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ಪೊಲೀಸರ ಈ ಕೃತ್ಯದ ವಿರುದ್ಧ ಕಟ್ಟುನಿಟ್ಟಾದ ಕ್ರಮಕ್ಕೆ ಒತ್ತಾಯಿಸಿದ್ದಾರೆ. “ಕಾಂಗ್ರೆಸ್ ಸರ್ಕಾರ ಧರ್ಮದ ಹೆಸರಿನಲ್ಲಿ ದುಷ್ಟ ಶಕ್ತಿಗಳಿಗೆ ಆಶ್ರಯ ನೀಡುತ್ತಿದೆ. ಹಿಂದೂ ಕಾರ್ಯಕರ್ತರನ್ನು ಬಂಧಿಸಿ, ಗಡಿಪಾರು ಮಾಡಿ, ಸುಳ್ಳು ಕೇಸುಗಳನ್ನು ಹಾಕಿ ದೌರ್ಜನ್ಯ ನಡೆಸುತ್ತಿದೆ. ಇದು ಸಂಪೂರ್ಣವಾಗಿ ಖಂಡನೀಯ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಡಿ.ವಿ. ಸದಾನಂದ ಗೌಡ, “ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕೊಲೆ, ಸುಲಿಗೆ, ದರೋಡೆ, ಮತ್ತು ಅತ್ಯಾಚಾರದಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಜನಸಾಮಾನ್ಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಸರಕಾರ ವಿಫಲವಾಗಿದೆ” ಎಂದು ಟೀಕಿಸಿದ್ದಾರೆ.

ವಿಜಯೇಂದ್ರ ಅವರು ಪೊಲೀಸರ ಈ ರೀತಿಯ ಕೃತ್ಯಗಳಿಗೆ ಬಿಜೆಪಿಯು ಕೈಕಟ್ಟಿ ಕೂರದಿರುವುದಾಗಿ ಎಚ್ಚರಿಕೆ ನೀಡಿದ್ದಾರೆ. “ಪೊಲೀಸರ ಮೂಲಕ ಗೂಂಡಾಗಿರಿ ಮಾಡಿದರೆ, ಬಿಜೆಪಿ ತಕ್ಕ ಪ್ರತ್ಯುತ್ತರವನ್ನು ನೀಡಲಿದೆ” ಎಂದು ಅವರು ಘೋಷಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page