Thursday, June 12, 2025

ಸತ್ಯ | ನ್ಯಾಯ |ಧರ್ಮ

ಆರೋಪಗಳನ್ನು ತಳ್ಳಿಹಾಕಿದ ಪತ್ರಕರ್ತ: ಸುಳ್ಳು ದೂರು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ದಿನೇಶ್ ಅಮೀನ್ ಮಟ್ಟು

ಬೆಂಗಳೂರು: ಪತ್ರಕರ್ತ ದಿನೇಶ್ ಅಮೀನ್ ಮಟ್ಟು ತಮ್ಮ ವಿರುದ್ಧ ಮಾಡಲಾದ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಸುಳ್ಳು ಆರೋಪ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮಕ್ಕೆ ಆದೇಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ದಿನೇಶ್‌ ಅಮೀನ್‌ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ನಾಮನಿರ್ದೇಶನಗೊಳ್ಳಲಿದ್ದಾರೆ ಎನ್ನುವ ಸುದ್ದಿಗಳುಹರಿದಾಡಿದ ಬೆನ್ನಲ್ಲೇ ಅವರ ವಿರುದ್ಧ ರಾಜ್ಯಪಾಲರ ಬಳಿ ದೂರು ಸಲ್ಲಿಸಲಾಗಿತ್ತು. ಇದೀಗ ಅವರು ಆ ಆರೋಪಗಳನ್ನು ನಿರಾಕರಿಸಿದ್ದು, ತನ್ನ ವಿರುದ್ಧ ಸುಳ್ಳು ದೂರು ನೀಡಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯಪಾಲರಿಗೆ ಪತ್ರ ಬರೆದಿರುವ ದಿನೇಶ್, “ಗಾಡ್ಕರ್ ಎಂಬ ಅಪರಿಚಿತ ವ್ಯಕ್ತಿಯು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ನನ್ನ ವಿವರಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲು ಆದೇಶಿಸಬೇಕೆಂದು ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.

“ನಾನು ಯಾವುದೇ ಸುಳ್ಳು ದಾಖಲೆ ಸಲ್ಲಿಸಿ ನಿವೇಶನ ಪಡೆದಿಲ್ಲ. ಫೇಕ್ ನ್ಯೂಸ್ ಪ್ರಕರಣದಲ್ಲಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯವಿಲ್ಲದ ಕಾರಣ, ಎರಡು ವರ್ಷಗಳಾದರೂ ಆರೋಪಪಟ್ಟಿಯನ್ನು ಸಲ್ಲಿಸಲಾಗಿಲ್ಲ. ಆದ್ದರಿಂದ, ನನ್ನ ಮೇಲೆ ಯಾವುದೇ ದೋಷಾರೋಪವಿಲ್ಲ. ‘ದಿ ಪಾಲಿಸಿ ಫ್ರಂಟ್’ ಸಂಸ್ಥೆಯಲ್ಲಿ ನಾನು ಮಾಲೀಕನೂ ಅಲ್ಲ, ಪಾಲುದಾರನೂ ಅಲ್ಲ,” ಎಂದು ದಿನೇಶ್ ಸ್ಪಷ್ಟಪಡಿಸಿದ್ದಾರೆ.



ವಿಧಾನಸಭೆ ನಾಮ ನಿರ್ದೇಶನ ಮುಂದೂಡಿದ್ದೇವೆ: ಸಿ ಎಮ್

ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಅದನ್ನು ಮುಂದಕ್ಕೆ ಹಾಕಿದ್ದೇವೆ ಎಂದಿದ್ದಾರೆ.

ದಿನೇಶ್‌ ಅಮೀನ್‌ ಮಟ್ಟು ಸಿದ್ದರಾಮಯ್ಯನವರ ಈ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಅವರು ಸಮಾಜಿಕ ಹೋರಾಟಗಳಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದಾರೆ


Related Articles

ಇತ್ತೀಚಿನ ಸುದ್ದಿಗಳು

You cannot copy content of this page