Tuesday, June 17, 2025

ಸತ್ಯ | ನ್ಯಾಯ |ಧರ್ಮ

ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಹೆಚ್.ಪಿ. ಸ್ವರೂಪ್ ಭೇಟಿ – ಪರಿಶೀಲನೆ

ಹಾಸನ : ತಾಲೂಕಿನ ಸಾಲಗಾಮೆ ಹೋಬಳಿ ವ್ಯಾಪ್ತಿಯಲ್ಲಿ ಮುಸುಕಿನ ಜೋಳ ಹಾನಿಯಾಗಿರು ಬಗ್ಗೆ ಹೆಚ್ಚಿನ ದೂರುಗಳು ಬಂದ ಹಿನ್ನಲೆಯಲ್ಲಿ ಅಂತಹ ಕೃಷಿ ಪ್ರದೇಶಗಳಿಗೆ ಇಂದು ಕ್ಷೇತ್ರದ ಶಾಸಕರಾದ ಹೆಚ್.ಪಿ. ಸ್ವರೂಪ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ತಾಲೂಕಿನಲ್ಲಿ ಒಟ್ಟು 12,200 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬಿತ್ತನೆಯಾಗಿದ್ದು, ಸಾಲಾಗಾಮೆ – 425 ಹೆಕ್ಟೇರ್ ಹಾಗೂ ಕಸಬಾ – 1500 ಹೆಕ್ಟೇರ್ ಸೇರಿ ಒಟ್ಟು 1925 ಹೆಕ್ಟೇರ್ ಪ್ರದೇಶಕ್ಕೆ ರೋಗ ಹರಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬೆಳೆ ಹಾನಿ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕೊಡಿಸುವ ಬಗ್ಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ ಅವರು, ಕ್ಷತ್ರದ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಬಗ್ಗೆ ಮಾಹಿತಿ ಪಡೆದರು. ಈ ವರೆಗೆ ಸುತ್ತಮುತ್ತಲ ಗ್ರಾಮದ ರೈತರು ಶಾಸಕರ ಬಳಿ ಜೋಳ ಕಳೆದುಕೊಂಡ ಬಗ್ಗೆ ತಮ್ಮ ಅಳಲು ತೋಡಿಕೊಂಡರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page