Wednesday, August 6, 2025

ಸತ್ಯ | ನ್ಯಾಯ |ಧರ್ಮ

ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ಬಿಜೆಪಿ ವಕ್ತಾರರ ನೇಮಕ: ಪ್ರತಿಪಕ್ಷಗಳ ಆಕ್ಷೇಪ

ಮುಂಬೈ: ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸಿದ್ದ ವಕೀಲೆ ಆರತಿ ಸಾಠೆ ಅವರನ್ನು ನೇಮಿಸಿರುವುದಕ್ಕೆ ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕರು ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ವಕ್ತಾರರಾಗಿ ಅವರು ಕೆಲಸ ಮಾಡಿದ ಹಿನ್ನೆಲೆಯಲ್ಲಿ, ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸುವುದು ನ್ಯಾಯಾಂಗದ ನಿಷ್ಪಕ್ಷಪಾತದ ಮೇಲೆ ಪರಿಣಾಮ ಬೀರುತ್ತದೆ ಎಂದು ವಿರೋಧ ಪಕ್ಷಗಳು ವಾದಿಸಿವೆ.

“ಬಿಜೆಪಿ ವಕ್ತಾರರಾಗಿ ಕೆಲಸ ಮಾಡಿದ ವ್ಯಕ್ತಿ ನ್ಯಾಯಾಧೀಶರಾದರೆ, ಜನರಿಗೆ ನ್ಯಾಯ ಸಿಗುತ್ತದೆಯೇ? ಸಂವಿಧಾನದ ರಕ್ಷಣೆ ಆಗುತ್ತದೆಯೇ?” ಎಂದು ಸಿಎಲ್‌ಪಿ ನಾಯಕ ವಿಜಯ್ ವಡೆಟ್ಟಿವಾರ್ ಪ್ರಶ್ನಿಸಿದ್ದಾರೆ. ಅವರ ಪದೋನ್ನತಿಯು ನ್ಯಾಯಾಂಗದ ನಿಷ್ಪಕ್ಷಪಾತದ ಮೇಲೆ ಪರಿಣಾಮ ಬೀರುತ್ತದೆ ಎಂದು ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಹೇಳಿದ್ದಾರೆ.

ಆದರೆ, ವಿರೋಧ ಪಕ್ಷಗಳ ಟೀಕೆಗಳು ಅರ್ಥಹೀನ ಎಂದು ಬಿಜೆಪಿ ಮುಖ್ಯಸ್ಥ ಕೇಶವ್ ಉಪಾಧ್ಯಾಯ್ ಹೇಳಿದ್ದಾರೆ. ಆರತಿ ಸಾಠೆ ಅವರು ಕಳೆದ ವರ್ಷವೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page