Friday, June 14, 2024

ಸತ್ಯ | ನ್ಯಾಯ |ಧರ್ಮ

ಉಪಾಧ್ಯಕ್ಷರು ನಮ್ಮನ್ನುದ್ದೇಶಿಸಿ ಮಾತನಾಡಲಿದ್ದಾರೆ

ಶರಣ್ ಅಭಿನಯದ “ಅಧ್ಯಕ್ಷ ” ಚಿತ್ರದಲ್ಲಿ  ಚಿಕ್ಕಣ್ಣ “ಉಪಾಧ್ಯಕ್ಷ” ರಾಗಿ ಅಭಿನಯಿಸಿ ಜನಪ್ರಿಯರಾಗಿದ್ದರು. ಈಗ “ಉಪಾಧ್ಯಕ್ಷ” ಚಿತ್ರದಲ್ಲಿ ಅವರೆ ನಾಯಕರಾಗಿ ನಟಿಸುತ್ತಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ತಮ್ಮ ಮಾತಿನಿಂದಲೇ ಜನಪ್ರಿಯರಾಗಿರುವ ಚಿಕ್ಕಣ್ಣ ಈಗ ತಮ್ಮ ನಾಯಕತ್ವದ ಸಿನಿಮಾಗೆ ಮಾತಿನ ಲೇಪನ ಮಾಡುತ್ತಿದ್ದಾರೆ.

ಉಮಾಪತಿ ಫಿಲಂಸ್ ಅರ್ಪಿಸುವ, ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ್ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್  ಸ್ಟುಡಿಯೋದಲ್ಲಿ ಉಪಾಧ್ಯಕ್ಷ ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ. ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಈಗಾಗಲೇ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ ಮುಂತಾದ ಕಡೆ ಐವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ.

ಚಿಕ್ಕಣ್ಣ ಅವರಿಗೆ ನಾಯಕಿಯಾಗಿ ಮಲೈಕ ನಟಿಸುತ್ತಿದ್ದಾರೆ. ಸಾಧುಕೋಕಿಲ, ರವಿಶಂಕರ್, ವೀಣಾಸುಂದರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ.

Related Articles

ಇತ್ತೀಚಿನ ಸುದ್ದಿಗಳು