Thursday, September 25, 2025

ಸತ್ಯ | ನ್ಯಾಯ |ಧರ್ಮ

ಜಾತಿಗಣತಿ ಸಮೀಕ್ಷೆ ಮುಂದೂಡಿ ಕೆಲ ಸಚಿವರಿಂದ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು : ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಜಾತಿಗಣತಿ ಸಮೀಕ್ಷೆ (Caste Survey) ಬಗ್ಗೆಯೂ ಸುದೀರ್ಘ ಚರ್ಚೆ ನಡೆಯಿತು. ಈ ಸಮೀಕ್ಷೆಯನ್ನು ಮುಂದೂಡುವಂತೆ ಕೆಲ ಸಚಿವರು (Ministers) ಪಟ್ಟು ಹಿಡಿದ ಪ್ರಸಂಗ ನಡೆಯಿತು.

ಸಮೀಕ್ಷೆ ಸಂಬಂಧ ಸಾಕಷ್ಟು ಗೊಂದಲ ಮೂಡುತ್ತಿದೆ. ತಯಾರಿ ಕೂಡ ಸರಿಯಾಗಿ ಆಗಿಲ್ಲ. ಹಾಗಾಗಿ ಮುಂದೂಡುವಂತೆ ಹೇಳಿರುವ ಕೆಲ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಮೀಕ್ಷೆ ಗೊಂದಲ ಸಂಬಂಧ ಸಮಾಲೋಚನೆ ನಡೆಸಿದರು.ತಾಂತ್ರಿಕ ದೋಷ ಸರಿಪಡಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಸಭೆ ನಡೆಸಲಾಗುವುದು. ನಾಳೆ ಜಿಲ್ಲಾಧಿಕಾರಿಗಳ ಸಭೆ ನಡೆಸಿ ತಾಂತ್ರಿಕ ಸಮಸ್ಯೆ ಸರಿಪಡಿಸಲು ಚರ್ಚೆ ನಡೆಸಲು ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ ನೀಡಿದರು.

ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 11.30 ಕ್ಕೆ ಗೃಹ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಜಾತಿಗಣತಿಯನ್ನ ಸ್ವೀಡಪ್ ಮಾಡುವ ದೃಷ್ಟಿಯಲ್ಲಿಯೂ ಸಿಎಂ ಚರ್ಚಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page