Thursday, January 22, 2026

ಸತ್ಯ | ನ್ಯಾಯ |ಧರ್ಮ

ಅಬಕಾರಿ ನೀತಿ ಪ್ರಕರಣ : ED ಸಮನ್ಸ್ ಗೈರು; ಕೇಜ್ರಿವಾಲ್ ಖುಲಾಸೆ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ED) ನೀಡಿದ್ದ ಸಮನ್ಸ್‌ಗೆ ಗೈರುಹಾಜರಾದ ಆರೋಪದ ಮೇಲೆ ದಾಖಲಿಸಲಾಗಿದ್ದ ಎರಡು ಪ್ರಕರಣಗಳಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯವು ಗುರುವಾರ ಖುಲಾಸೆಗೊಳಿಸಿದೆ.

ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ಪರಾಸ್ ದಲಾಲ್ ಅವರು ಈ ಆದೇಶ ಹೊರಡಿಸಿದ್ದು, ತೀರ್ಪಿನ ವಿವರವಾದ ಪ್ರತಿಯನ್ನು ಇನ್ನಷ್ಟೇ ನಿರೀಕ್ಷಿಸಲಾಗುತ್ತಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಸೆಕ್ಷನ್ 50ರ ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಹೊರಡಿಸಿದ್ದ ಸಮನ್ಸ್‌ಗಳನ್ನು ಪಾಲಿಸದ ಆರೋಪದ ಹಿನ್ನೆಲೆಯಲ್ಲಿ, ಫೆಬ್ರವರಿ 2024ರಲ್ಲಿ ED ಕೇಜ್ರಿವಾಲ್ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು.

ಅಬಕಾರಿ ನೀತಿ ಸಂಬಂಧಿತ ಆರೋಪಿತ ಹಗರಣದ ತನಿಖೆಗಾಗಿ ವಿವಿಧ ದಿನಾಂಕಗಳಲ್ಲಿ ಒಟ್ಟು ಐದು ಬಾರಿ ಸಮನ್ಸ್ ಜಾರಿಗೊಳಿಸಲಾದರೂ, ಕೇಜ್ರಿವಾಲ್ ಅವರು ED ಮುಂದೆ ಹಾಜರಾಗಿರಲಿಲ್ಲ ಎಂದು ಸಂಸ್ಥೆ ಆರೋಪಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page