Wednesday, January 28, 2026

ಸತ್ಯ | ನ್ಯಾಯ |ಧರ್ಮ

ಮಹಾಂತೇಶ್‌ ಬೀಳಗಿ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ – ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಅಪಘಾತದಲ್ಲಿ ನಿಧನ ಹೊಂದಿದ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ (Mahantesh bilagi )ಅವರ ಪುತ್ರಿಗೆ ಸರ್ಕಾರಿ ನೌಕರಿ ನೀಡಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಆದೇಶ ಹೊರಡಿಸಿದೆ. ನ. 25 ರಂದು ಮಹಾಂತೇಶ್‌ ಬೀಳಗಿಯವರು ಬೆಳಗಾವಿಯಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದರು.

ಅವರು ಮೃತಪಟ್ಟಾಗ ನೌಕರಿಯಲ್ಲಿದ್ದ ಕಾರಣ ಅವರ ಪುತ್ರಿ ಚೈತನ್ಯಾ ಎಂ ಬೀಳಗಿಗೆ ಕರ್ನಾಟಕ ನಾಗರಿಕ ಸೇವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ನಿಮಗಳ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಚೈತನ್ಯಾ ಬೀಳಗಿಯವರಿಗೆ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿನ ಸಹಾಯಕ ಹುದ್ದೆಗೆ ಎರಡು ವರ್ಷಗಳ ಪರೀಕ್ಷಾರ್ಥ ಅವಧಿಯ ಮೇರೆಗೆ ಷರತ್ತುಗಳಿಗೆ ಒಳಪಟ್ಟಂತೆ ನೇಮಕ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page