Friday, June 14, 2024

ಸತ್ಯ | ನ್ಯಾಯ |ಧರ್ಮ

ಡಿ.ಕೆ. ಶಿವಕುಮಾರ್‌ ಅವರ ಮನೆ ಮತ್ತು ಇತರೆಡೆ ಸಿಬಿಐ ದಾಳಿ

ಇತ್ತ ಕಾಂಗ್ರೆಸ್‌ ಪಕ್ಷದ ನಾಯಕರು ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ಯಾತ್ರೆಯನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದರೆ ಅತ್ತ ಕೇಂದ್ರ ತನಿಖಾ ದಳದ ಅಧಿಕಾರಿಗಳು KPCC ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಮನೆ ಮತ್ತು ಇತರ ಸ್ಥಳಗಳಲ್ಲಿ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಈ ಪರಿಶೀಲನೆಗಳಿಗೆ ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದರು. ಉಳಿದ ವಿವರಗಳನ್ನು ಎದುರುನೋಡಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು