ಕೆಂಪುಕೋಟೆಯ ಬಳಿ ಸಂಭವಿಸಿದ ಬಾಂಬ್ ಸ್ಫೋಟ ಘಟನೆಯು ಆತ್ಮಾಹುತಿ ದಾಳಿಯಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದೃಢಪಡಿಸಿದೆ. ಕಾರಿನ ಒಳಗಿನಿಂದಲೇ ಉಮರ್ ನಬಿ ಈ ಆತ್ಮಾಹುತಿ ದಾಳಿ ನಡೆಸಿದ್ದಾನೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಭಾರತೀಯ ಸಾರ್ವಭೌಮತ್ವದ ಸಂಕೇತವಾಗಿ ಕೆಂಪುಕೋಟೆ ನಿಂತಿರುವುದೇ ಉಗ್ರರು ಈ ಸ್ಥಳವನ್ನು ಗುರಿಯಾಗಿಸಿಕೊಳ್ಳಲು ಕಾರಣ ಎಂದು ತಿಳಿಸಲಾಗಿದೆ. ಎನ್ಐಎ ಇತ್ತೀಚೆಗೆ ನ್ಯಾಯಾಲಯಕ್ಕೆ 7,500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.
ಇದರ ಪ್ರಕಾರ, ಕಳೆದ ವರ್ಷ ನವೆಂಬರ್ 10 ರಂದು ಕೆಂಪುಕೋಟೆಯ ಬಳಿ ನಡೆದ ಬಾಂಬ್ ಸ್ಫೋಟ ಘಟನೆಯಲ್ಲಿ ಒಟ್ಟು 15 ಜನರು ಪ್ರಾಣ ಕಳೆದುಕೊಂಡಿದ್ದರು. ವೃತ್ತಿಯಲ್ಲಿ ವೈದ್ಯನಾಗಿದ್ದು, ಫರಿದಾಬಾದ್ನ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕನಾಗಿದ್ದ ಉಮರ್ ನಬಿ, ಉಗ್ರಗಾಮಿ ಸಿದ್ಧಾಂತ ಹೊಂದಿರುವ ವ್ಯಕ್ತಿಗಳೊಂದಿಗೆ ನೆಟ್ವರ್ಕ್ ರೂಪಿಸಲು 2022 ರಿಂದ ಕೆಲಸ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
