Tuesday, June 18, 2024

ಸತ್ಯ | ನ್ಯಾಯ |ಧರ್ಮ

ಪ.ಜಾತಿ/ವರ್ಗ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ : ಸಿಎಂ ಬೊಮ್ಮಾಯಿ

ಬೆಂಗಳೂರು : ಇಂದು ನಡೆದ ಸರ್ವಪಕ್ಷ  ಸರ್ವಪಕ್ಷ ಸಭೆಯಲ್ಲಿ ಪ. ಜಾತಿ/ವರ್ಗ ದವರಿಗೆ ಮೀಸಲಾತಿ ಹೆಚ್ಚಿಸುವಂತೆ ಸಿಎಂ ಬೊಮ್ಮಾಯಿ ಮಹತ್ವದ ನಿರ್ಧಾರವನ್ನು ಘೋಷಿಸಿದ್ದಾರೆ.

ಪ.ಜಾತಿ ಮತ್ತು ಪ.ವರ್ಗ ಜನಾಂಗದವರಿಗೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಉಭಯ ಸದನಗಳ ನಾಯಕರು ಸೇರಿ ಶುಕ್ರವಾರದಂದು  ನಡೆಸಿದ ಸರ್ವಪಕ್ಷ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರ ವರದಿಗಳನ್ನು ಆಧರಿಸಿ ಪ.ಜಾತಿ ಜನಾಂಗದವರ ಶೇ.15 ರಿಂದ ಶೇ 17 ಹಾಗೆಯೇ ಪ.ವರ್ಗ ದವರಿಗೆ ಶೇ.3 ರಿಂದ ಶೇ 7 ಮೀಸಲಾತಿಯನ್ನು ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ಘೋಷಣೆ ಮಾಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಯಿಯವರು ʼನಾಗಮೋಹನ್‌ ದಾಸ್‌ ವರದಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿದೆ. ಇದರ ಸಲುವಾಗಿ ನಾಳೆಯೇ ಸಂಪುಟ ಸಭೆ ಕರೆಯಲಾಗುವುದು. ಸರ್ಕಾರಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಾಳೆ ಅಧಿಕೃತ ಆದೇಶ ನೀಡಲಾಗುತ್ತದೆʼ ಎಂದು ತಿಳಿಸಿದರು.

ಹಾಗೆಯೇ ʼಈಗ ಇರುವ ಯಾವುದೇ  ಸಮುದಾಯಗಳ ಮೀಸಲಾತಿಯನ್ನು ಕಡಿಮೆ ಮಾಡುವುದಿಲ್ಲ. ಯಾವುದೇ ಜಾತಿಗೂ ಸಮಸ್ಯೆ ಆಗದಂತೆ, ಅನ್ಯಾಯ ಆಗದಂತೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆʼ ಎಂದು  ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.

ಇದನ್ನೂ ನೋಡಿ: ರಾಹುಲ್‌ ಗಾಂಧಿಯವರೇ ಕನ್ನಡಿಗರ ಈ ಸೊಲ್ಲು ಆಲಿಸಿ
ಭಾರತವನ್ನು ಜೋಡಿಸಲು ಚಾರಿತ್ರಿಕ “ಬಾರತ್‌ ಜೋಡೋ” ಪಾದಯಾತ್ರೆ ಹಮ್ಮಿಕೊಂಡಿರುವ ರಾಹುಲ್‌ ಗಾಂಧಿಯವರು ಕನ್ನಡಿಗರ ಆತಂಕಗಳನ್ನು ನಿವಾರಿಸುವ ಬದ್ಧತೆ ತೋರುರೆ, ಕನ್ನಡಿಗರ ಈ ಸೊಲ್ಲನ್ನು ಆಲಿಸುವವರೆ? ಪತ್ರಕರ್ತ, ಲೇಖಕ ಹರ್ಷಕುಮಾರ್‌ ಕುಗ್ವೆ ಕನ್ನಡಿಗರ ಹಕ್ಕೊತ್ತಾಯವೇನು ಎಂದು ಇಲ್ಲಿ ತಿಳಿಸಿದ್ದಾರೆ
.

https://www.facebook.com/peepaltvkannada/videos/1200412170521513

Related Articles

ಇತ್ತೀಚಿನ ಸುದ್ದಿಗಳು