Home ಬೆಂಗಳೂರು ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕಾಗಿ ಆಮ್ ಆದ್ಮಿ ಪಕ್ಷ ಒಂದೇ ಆಯ್ಕೆ : ಪೃಥ್ವಿರೆಡ್ಡಿ

ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕಾಗಿ ಆಮ್ ಆದ್ಮಿ ಪಕ್ಷ ಒಂದೇ ಆಯ್ಕೆ : ಪೃಥ್ವಿರೆಡ್ಡಿ

0

ಬೆಂಗಳೂರು: ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿನಗರ ವಾರ್ಡ್ ನಲ್ಲಿ ನಿನ್ನೆ ಆಮ್ ಆದ್ಮಿ ಪಕ್ಷದ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು .

ಸುದ್ದಿಗಾರರೊಂದಿಗೆ ಮಾತನಾಡುತ್ತ ಪೃಥ್ವಿ ರೆಡ್ಡಿಯವರು ರಾಜಪ್ರಭುತ್ವದಿಂದ ಸ್ವತಂತ್ರಗೊಂಡು 75 ವರ್ಷಗಳಾದರೂ ಸಹ ನಮ್ಮನ್ನಾಳುತ್ತಿರುವ ಜನಪ್ರತಿನಿಧಿಗಳು ಅದೇ ರಾಜಪ್ರಭುತ್ವ ವನ್ನು ಉಳಿಸಿಕೊಂಡು ಪ್ರಜಾಪ್ರಭುತ್ವವನ್ನು ದಮನ ಮಾಡುತ್ತಿರುವುದು ಅತ್ಯಂತ ಕಳವಳಕಾರಿಯಾದ ಸಂಗತಿ. ಕೂಡಲೇ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಮ್ ಆದ್ಮಿ ಪಕ್ಷದ ಜನಸಾಮಾನ್ಯನನ್ನು ಗೆಲ್ಲಿಸುವುದೊಂದೇ ನಮ್ಮ ಮುಂದಿರುವ ಏಕೈಕ ಮಾರ್ಗ ಎಂದು ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಮೂಲಕ ರಾಜಕೀಯ ಕಲುಷಿತ ತ್ವಚೆಯನ್ನು ಹೋಗಲಾಡಿಸಿ ಜನಸಾಮಾನ್ಯನ ಅಳಲನ್ನು, ನೋವು – ದುಮ್ಮಾನ ಗಳ ಪರಿಹಾರಕ್ಕಾಗಿ  ಆಮ್ ಆದ್ಮಿ ಪಕ್ಷವನ್ನು ಅಪ್ಪಿಕೊಳ್ಳುವುದು ಈಗ ಇರುವ ಏಕೈಕ ದಾರಿ ಎಂದು ತಿಳಿಸಿದರು.

ಮುಂಬರುವ  ಬೆಂಗಳೂರು ಬೃಹತ್  ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಬೃಹತ್ ಬಹುಮತದಿಂದ ಪಾಲಿಕೆಯ ಕೈ ಹಿಡಿಯಲಿದೆ ಎಂದು ತಿಳಿಸಿದರು.

ಪಾದಯಾತ್ರೆ ಸ್ಥಳೀಯ ಬೃಹತ್ ಜನಸ್ತೋಮದೊಂದಿಗೆ ಯಶಸ್ವಿಯಾಯಿತು. ಪಾದಯಾತ್ರೆಯಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಸೇರಿದಂತೆ ಡಾ. ರಮೇಶ್  ಬೆಲ್ಲಮಕೊಂಡ, ರಹೀಂಖಾನ್, ಅರ್ಚನಾ ಹಾಗೂ ಇನ್ನಿತರ ಸ್ಥಳೀಯ ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಿದ್ದರು.

You cannot copy content of this page

Exit mobile version