ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಜೊತೆ ಎಂಟು ಶಾಸಕ ಪೈಕಿ ಜಿ ಪರಮೇಸರ್ ಕೂಡ 6ನೇ ಬಾರಿ ಸಚಿವರಾಗಿ ಸಿದ್ದರಾಮಯ್ಯ ಸಂಪುಟ ಸೇರಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ನ ಪರಿಶಿಷ್ಠ ಜಾತಿಯ (ಬಲ ಗೈ) ಸಮುದಾಯದ ಡಾ.ಜಿ. ಪರಮೇಶ್ವರ್ ಅತಿ ದೀರ್ಘ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದ ಹೆಗ್ಗಳಿಕೆ ಹೊಂದಿರುವ ಇವರು. 1993ರಿಂದಲೂ ವಿವಿಧ ಸರಕಾರಗಳಲ್ಲಿ ಸಚಿವರಾಗಿ ಹಲವು ಖಾತೆಗಳನ್ನು ನಿರ್ವಹಿಸಿದವರು. ಜೊತೆಗೆ ಕರ್ನಾಟಕದ 7ನೇ ಉಪ ಮುಖ್ಯಮಂತ್ರಿ ಆಗಿದ್ದವರು. ಇಂತಹ ವ್ಯಕ್ತಿ ಇದೀಗ ಮತ್ತೆ ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿದ್ದಾರೆ.
ತುಮಕೂರಿನ ಗೊಲ್ಲಹಳ್ಳಿಯಲ್ಲಿ ಮಾಜಿ ಎಂಎಲ್ಸಿ ಜಿಎಚ್ ಮರಿಯಪ್ಪ ಹಾಗೂ ಗಂಗಮಲ್ಲಮ್ಮ ಅವರ ಮಗನಾಗಿ ಪರಮೇಶ್ವರ್ ಆಗಸ್ಟ್ 6, 1991ರಂದು ಜನಿಸಿದರು. ಗೊಲ್ಲಹಳ್ಳಿಯಲ್ಲೇ ಪ್ರಾಥಮಿಕ ಶಿಕ್ಷಣ ಪೂರೈಸಿದ ಅವರು ತಮ್ಮ ತಂದೆಯೇ ಸ್ಥಾಪಿಸಿದ್ದ ಸಿದ್ಧಾರ್ಥ ಪ್ರೌಢ ಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿದರು. ತುಮಕೂರು ಸರಕಾರಿ ಪಿಯು ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರು ಕೃಷಿ ವಿವಿಯಿಂ ಬಿಎಸ್ಸಿ ಹಾಗೂ ಎಂಎಸ್ಸಿ ಪದವಿ ಪಡೆದು ಆಸ್ಟ್ರೇಲಿಯಾದ ಅಡಿಲೇಡ್ ವಿವಿಯಿಂದ ಡಾಕ್ಟರೇಟ್ ಪಡೆದುಕೊಂಡಿದ್ದಾರೆ.
ರಾಜಕೀಯ ಪ್ರವೇಶದ ಬಗ್ಗೆ ಯೋಚನೆಯೂ ಮಾಡದ ಪರಮೇಶ್ವರ್ ಅಂದು ರಾಜೀವ್ ಗಾಂಧಿಯವರ ಒತ್ತಾಯದ ಮೇರೆಗೆ ರಾಜಕೀಯ ಪ್ರವೇಸ ಮಾಡಿದರು. ಸಿದ್ಧಾರ್ಥ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಬರುವಂತೆ ರಾಜೀವ್ ಗಾಂಧಿ ಅವರಿಗೆ ಆಹ್ವಾನ ನೀಡಲು ತೆರಳಿದ ಸಂದರ್ಭದಲ್ಲಿ ಪರಮೇಶ್ವರ್ ಅವರನ್ನು ರಾಜಕೀಯಕ್ಕೆ ಬರುವಂತೆ ಆಹ್ವಾನಿಸಿದ್ದರು. ರಾಜಕೀಯಕ್ಕೆ ಬರಲು ಒಪ್ಪಿಗೆ ನೀಡಿದ ಬಳಿಕ 1989ರಲ್ಲಿ ಅವರನ್ನು ಕೆಪಿಸಿಸಿ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು.
1989ರಲ್ಲಿ ಮಧುಗಿರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದರು. 1993ರಲ್ಲಿ ವೀರಪ್ಪ ಮೋಯ್ಲಿ ಸರಕಾರದಲ್ಲಿ ರೇಷ್ಮೆ ಸಚಿವರಾಗಿ ಮೊದಲ ಬಾರಿಗೆ ಸಂಪುಟ ಸೇರಿದರು. ಮರು ವರ್ಷವೇ ನಡೆದ ಚುನಾವಣೆಯಲ್ಲಿ ಅಂದರೆ 1994ರಲ್ಲಿ ಮಧುಗಿರಿ ಕ್ಷೇತ್ರದಲ್ಲಿ ಪರಮೇಶ್ವರ್ ಅವರಿಗೆ ಸೋಲಾಯಿತು. ಬಳಿಕ 1999ರಲ್ಲಿ ಗೆಲುವು ಸಾಧಿಸಿದ ಅವರು ಎಸ್ಎಂ ಕೃಷ್ಣ ಸರ್ಕಾರದಲ್ಲಿ ಉನ್ನತ ಶಿಕ್ಷಣ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವರಾಗಿದ್ದರು.
2004ರಲ್ಲಿ ಮಧುಗಿರಿಯಲ್ಲಿ ಮತ್ತೆ ಗೆಲುವು ಸಾಧಿಸಿದರು. 2008ರಲ್ಲಿ ವಿಧಾನಸಭಾ ಕ್ಷೇತ್ರಗಳ ಪುನರ್ವಿಂಗಡಣೆಯ ಬಳಿಕ ಕೊರಟಗೆರೆ ಕ್ಷೇತ್ರಕ್ಕೆ ಬಂದ ಪರಮೇಶ್ವರ್ ಕೊರಟಗೆರೆಯಿಂದಲೂ ಶಾಸಕರಾಗಿ ಆಯ್ಕೆಯಾದರು. ಇದರ ನಡುವೆ 2010ರಲ್ಲಿ ಅವರು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡರು.
ಆದರೆ, 2013ರ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೇ ಕೊರಟಗೆರೆ ಕ್ಷೇತ್ರದಲ್ಲಿ ಅವರು ಸೋತರು. ಇದರಿಂದ ಸಿಎಂ ಸ್ಥಾನದ ಕನಸು ಮಣ್ಣಾಯಿತು. 2014ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡು ನಂತರ ಅವರು ಸಿದ್ದರಾಮಯ್ಯ ಸಂಪುಟ ಸೇರಬೇಕಾಯಿತು.
ಪ್ರಸ್ತುತ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಜಯ ಕಂಡಿದ್ದು, ಸಿದ್ದರಾಮಯ್ಯ ಅವರ ಸಂಪುಟಕ್ಕೆ ಮತ್ತೆ ಸಚಿವರಾಗಿ ಆಯ್ಕೆಯಾಗಿ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಕೂಡ ಸ್ವೀಕರಿಸಿದ್ದಾರೆ.