ಕಲಬುರಗಿ: ನಿಂತಿದ್ದ , ಕಂಟೇನರ್ ಲಾರಿಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದ ಪರಿಣಾಮ, ಸಿಂದಗಿಯ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಯುತ ರವಿ ಉಕ್ಕುಂದ ಹಾಗೂ ಅವರ ಧರ್ಮಪತ್ನಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.

ಮಾಹಿತಿ ಪ್ರಕಾರ, ಸಿಪಿಐ ರವಿ ಉಕ್ಕುಂದ, ಪತ್ನಿ ಮಧುರವರು, ಇಂದು ಆಸ್ಪತ್ರೆಗೆಂದು ಕಾರಿನಲ್ಲಿ ಪ್ರಯಾಣಿಸುವಾಗ ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ರವಿ ಉಕ್ಕುಂದ ಮತ್ತು ಮಧುರವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.