Wednesday, June 19, 2024

ಸತ್ಯ | ನ್ಯಾಯ |ಧರ್ಮ

ಶೃಂಗೇರಿಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಮೂವರ ಸಾವು

ಉಡುಪಿ : ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಒಂದೇ ಕುಟುಂಬದ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಕಾರ್ಕಾಳದ ಉಡುಪಿ ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.

ಉಡುಪಿಯ ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪ ನೆಲ್ಲಿಕಾರು ಬಳಿ ಶನಿವಾರದಂದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಖಾಸಗಿ ಬಸ್‌ ಮತ್ತು ಕಾರು ಡಿಕ್ಕಿ ಹೊಡೆದುಕೊಂಡಿದ್ದು, ಗಂಡ, ಹೆಂಡತಿ ಮತ್ತು ಮಗು ಸಮೇತ ಒಂದೇ ಕುಟುಂಬರ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿದ್ದ ಆಂಧ್ರದ ಮೂವರು ಧರ್ಮಸ್ಥಳದಿಂದ ಶೃಂಗೇರಿಗೆ ಹೋಗುವಾಗ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕಾರ್ಕಾಳ ಪೊಲೀಸರು, ಸ್ಥಳವನ್ನು ಪರಿಶೀಲಿಸಿದ್ದು, ಸಾರ್ವಜನಿಕರ ಸಹಕಾರದಿಂದ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರತೆಗೆದಿದ್ದು, ಬಳಿಕ ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ.

ನಾಗರಾಜ್(40‌), ಪ್ರತ್ಯುಷಾ(32) ಮತ್ತು ಎರಡು ವರ್ಷದ ಮಗು ಅಪಘಾತದಲ್ಲಿ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು