Home ಅಪರಾಧ ನಿವೃತ್ತ ಡಿಜಿ ಓಂ ಪ್ರಕಾಶ್ ಕೊಲೆ ಪ್ರಕರಣ; ಆರೋಪಿಗಳು ಬಂಧನ, ತನಿಖೆ ಸಿಬಿಐಗೆ ವರ್ಗಾವಣೆ

ನಿವೃತ್ತ ಡಿಜಿ ಓಂ ಪ್ರಕಾಶ್ ಕೊಲೆ ಪ್ರಕರಣ; ಆರೋಪಿಗಳು ಬಂಧನ, ತನಿಖೆ ಸಿಬಿಐಗೆ ವರ್ಗಾವಣೆ

0

ನಿವೃತ್ತ ಐಜಿಪಿ ಡಿಜಿ ಓಂ ಪ್ರಕಾಶ್ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದು, ಪ್ರಕರಣದ ಹೆಚ್ಚಿನ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈಗಾಗಲೇ ಬಹುತೇಕ ತನಿಖೆ ಮುಗಿದಿದ್ದು, ಮುಂದಿನ ತನಿಖೆಯನ್ನು ಸಿಬಿಐ ಮುಂದುವರೆಸಲಿದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಹತ್ಯೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಓಂ ಪ್ರಕಾಶ್ ಹತ್ಯೆ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿವ ನಿಟ್ಟಿನಲ್ಲಿ ತನಿಖೆ ಸಿಸಿಬಿಗೆ ವರ್ಗಾಯಿಸಲಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರ ವಾಟ್ಸಪ್ ಚಾಟ್ ಬಗ್ಗೆ ಹರಿದಾಡುತ್ತಿರುವ ವೈರಲ್ ಅಂಶದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಓಂ ಪ್ರಕಾಶ್ ಪತ್ನಿ ವಾಟ್ಸಪ್ ಮೆಸೇಜ್ ಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಪೊಲೀಸರು ಎಲ್ಲವನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದಂತ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು. ತಕ್ಷಣದ ಅನುಮಾನಗಳ ಹಿನ್ನೆಲೆಯಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪತ್ನಿಯನ್ನು ಬಂಧಿಸಲಾಗಿತ್ತು.

ನಿನ್ನೆ ಓಂ ಪ್ರಕಾಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

You cannot copy content of this page

Exit mobile version