ನಟ ದರ್ಶನ್ ಅಭಿಮಾನಿಗಳಿಂದ ಬೆದರಿಕೆ: ಪೊಲೀಸರಿ ದೂರು ನಟ ಪ್ರಥಮ್

ಬೆಂಗಳೂರು: ನಟ ದರ್ಶನ್ ಅವರ ಅಭಿಮಾನಿಗಳಿಂದ ತಮಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕನ್ನಡ ನಟ ಪ್ರಥಮ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರಿಗೆ ಸಲ್ಲಿಸಿದ ದೂರಿನಲ್ಲಿ ಪ್ರಥಮ್, ಜುಲೈ 22ರಂದು ದೊಡ್ಡಬಳ್ಳಾಪುರದಲ್ಲಿ ದೇವಾಲಯದ ಪೂಜೆ ಮುಗಿಸಿ ಹಿಂತಿರುಗುತ್ತಿದ್ದಾಗ, ಯಶಸ್ವಿನಿ, ಬೇಕರಿ ರಘು ಮತ್ತು ಕೆಲವು ಅಪರಿಚಿತ ವ್ಯಕ್ತಿಗಳು ತಮ್ಮನ್ನು ತಡೆದು ನಿಲ್ಲಿಸಿ, ದರ್ಶನ್ ವಿರುದ್ಧ ಮಾತನಾಡಿದ್ದಕ್ಕಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಥಮ್, ತಮ್ಮ ಮೇಲೆ ಶಸ್ತ್ರಾಸ್ತ್ರಗಳಿಂದ ಬೆದರಿಕೆ ಹಾಕಿದ್ದಲ್ಲದೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಜೊತೆ ತೆಗೆಸಿಕೊಂಡಿದ್ದ ಫೋಟೋವನ್ನು ತೋರಿಸಿ ಬೆದರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ದೂರಿನ ಕುರಿತು ಮುಂದಿನ ಕಾನೂನು ಕ್ರಮಕ್ಕಾಗಿ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು