ಸುದೀಪ್ ನಟನೆಯ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದ ನಟಿ ರಮ್ಯಾ ಈಗ ಹೆಚ್ಚುವರಿ ಚಿನ್ನ ವರ್ಗಾವಣೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಟಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ರನ್ಯಾ ವಿರುದ್ಧ ಅಕ್ರಮವಾಗಿ ಹೆಚ್ಚುವರಿ ಚಿನ್ನ ಸಾಗಾಟ ಮಾಡಿದ ಆರೋಪ ಕೇಳಿ ಬಂದಿದೆ. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ನ ಡಿಆರ್ಐ ಅಧಿಕಾರಿಗಳು ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪ ರನ್ಯಾ ಮೇಲೆ ಇದೆ.
ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಹತ್ತಿರದ ಸಂಬಂಧಿಯಾಗಿರುವ ರನ್ಯಾ ರಾವ್ ಕನ್ನಡದ ‘ಮಾಣಿಕ್ಯ’, ‘ಪಟಾಕಿ’ ಹಾಗೂ ತಮಿಳಿನ ‘ವಾಘಾ’ ಸಿನಿಮಾಗಳಲ್ಲಿ ನಟಿಸಿದ್ದರು. ಸಧ್ಯ ರನ್ಯಾ ರಾವ್ ಅವರ ವಿಚಾರಣೆ ಮೂಲಕ ಕನ್ನಡ ಚಿತ್ರರಂಗ ಮಾತೊಂದು ಶಾಕಿಂಗ್ ಸುದ್ದಿ ಎದುರಿಸಿದೆ.