ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ವಿಜಿಂಜಂನಲ್ಲಿ ನಡೆಯುತ್ತಿರುವ ಅದಾನಿ ಬಂದರು ಯೋಜನೆಯನ್ನು ವಿರೋಧಿಸಿ ಮೀನುಗಾರರು ಪ್ರತಿಭಟನೆ ನಡೆಸಿದರು. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು ಪುನರ್ವಸತಿ ಮತ್ತು ಸಮುದ್ರ ಸವೆತಕ್ಕೆ ಶಾಶ್ವತ ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಕಾಮಗಾರಿ ಆರಂಭವಾದಾಗ ಕರಾವಳಿ ತೀರದ ನೂರಾರು ಎಕರೆ ಭೂಮಿ ನಾಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.